ಮಡಿಕೇರಿ, ಜ. ೨೪ : ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ವತಿಯಿಂದ ‘ಭವಿಷ್ಯ ನಿಧಿ ನಿಮ್ಮ ಹತ್ತಿರ' ೨.೦ ಅಡಿಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಮಾಹಿತಿ ಕಾರ್ಯ ಕ್ರಮವನ್ನು ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯಿಂದ ನಡೆಸಲಾಗುತ್ತದೆ. ತಾ. ೨೭ ರಂದು ಬೆಳಿಗ್ಗೆ ೯ ಗಂಟೆಗೆ ಮಡಿಕೇರಿಯ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಪಿ.ಎಫ್ ಸದಸ್ಯರು, ಪಿಂಚಣಿದಾರರು, ಉದ್ಯೋಗದಾತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದು ಕೊಳ್ಳುವಂತೆ ಸಂಘಟನೆಯ ಪ್ರಕಟಣೆ ಕೋರಿದೆ. ಹೆಚ್ಚಿನ ಮಾಹಿತಿಗೆ ೦೮೨೧- ೨೫೯೯೨೦೦/೨೨೨ ಅನ್ನು ಸಂಪರ್ಕಿಸಬಹುದು.