ಮುಳ್ಳೂರು, ಜ. ೨೭: ಸಮೀಪದ ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಲಯನ್ಸ್ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಹಾಗೂ ಸ್ವಾಮಿ ವಿವೇಕಾನಂದ ವಾಲೆಂಟರಿ ಬ್ಲಡ್ ಬ್ಯಾಂಕ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ತಾ. ೨೮ ರಂದು (ಇಂದು) ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಡಿರುವುದಾಗಿ ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ. ಅಪ್ಪಸ್ವಾಮಿ ರಕ್ತದಾನ ಶಿಬಿರವನ್ನು ಉದ್ಘಾಟಿಸಲಿದ್ದು, ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಪಿ. ಶೇಷಾದ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಕೆ.ಎಂ. ಜಗನ್‌ಪಾಲ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಂ.ಆರ್. ನಿರಂಜನ್, ಸಾಮಾಜಿಕ ಕಾರ್ಯಕರ್ತ ಎನ್. ಈಶ್ವರ್, ಲಯನ್ಸ್ ಪ್ರಮುಖರಾದ ಬಿ.ಕೆ. ಚಿಣ್ಣಪ್ಪ, ಬಿ.ಸಿ. ಧರ್ಮಪ್ಪ, ಜಿ. ನಾರಾಯಣಸ್ವಾಮಿ, ಬಿ.ಬಿ. ಪರಮೇಶ್, ಕೆ.ಎನ್. ಕಾರ್ಯಪ್ಪ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಈ.ಎಂ. ದಯಾನಂದ್ ತಿಳಿಸಿದ್ದಾರೆ