ಮಡಿಕೇರಿ, ಜ. ೩೦ : ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ತಾಲೂಕು ಪಿ.ಡಿ.ಓ ಕ್ಷೇಮಾಭಿವೃದ್ಧಿ ಸಂಘವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಕಾಂತೂರು ಮೂರ್ನಾಡ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಕೆ.ಎಂ. ಚಂದ್ರಮೌಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷೆಯಾಗಿ ವೀಣಾಕುಮಾರಿ, ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪ್ರಭು, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಧರ್, ಖಜಾಂಜಿಯಾಗಿ ಸುನಿತಾ, ಸಮಿತಿ ಸದಸ್ಯರುಗಳಾಗಿ ಉದಯ, ದಿನೇಶ್, ಆಶಾ ಕುಮಾರಿ, ಶೋಭಾರಾಣಿ ರವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.