ವೀರಾಜಪೇಟೆ, ಜ. ೩೦: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಹೇಮಂತ್ ಕುಮಾರ್ ಎಂ.ಎನ್. ಅವರು ಸಲ್ಲಿಸಿದ್ದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ವಿಶ್ವವಿದ್ಯಾನಿಲಯವು ಅಂಗೀಕರಿಸಿದೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರೊ. ಕವಿತಾ ರೈ ಅವರ ಮಾರ್ಗದರ್ಶನದಲ್ಲಿ ಹೇಮಂತ್ ಕುಮಾರ್ ಎಂ.ಎನ್. ಅವರು ‘ಕೊಡವ ಹಾಗೂ ತುಳು ಸಂಸ್ಕೃತಿಗಳ ತೌಲನಿಕ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.

ಹೇಮಂತ್ ಕುಮಾರ್ ಎಂ.ಎನ್. ಇವರು ವೀರಾಜಪೇಟೆಯ ಸಂತ ಅನ್ನಮ್ಮ ಪ.ಪೂ. ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.