ಮಡಿಕೇರಿ, ಮಾ. ೧೮: ಸ್ಥಳೀಯ ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ನಗರದ ರಾಘವೇಂದ್ರ ದೇವಾಲಯ ರಸ್ತೆಯ ನೇತಾಜಿ ಜಂಕ್ಷನ್ ಬಳಿ ಇರುವ ಹೇಮಾವತಿ ಪ್ರಸನ್ನ ಅವರ ಮನೆಯ ಆವರಣದಲ್ಲಿ ನಡೆಸಲಾಯಿತು.

ಲಿಸಿ ಅಮ್ಮಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೊಡಗು ಡಿಸಿಸಿ ಬ್ಯಾಂಕಿನ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕಿ ಪ್ರೇಮ ಕಾರ್ಯಪ್ಪ ಅವರು ಅಂರ‍್ರಾಷ್ಟಿçÃಯ ಮಹಿಳಾ ದಿನಾಚರಣೆಯ ಬಗ್ಗೆ ಮಾತನಾಡಿ, ಕುಟುಂಬದಲ್ಲಿ ಮಹಿಳೆಯರು ಪ್ರತಿನಿತ್ಯ ಮಾಡಬೇಕಾದ ಕೆಲಸ ಕಾರ್ಯಗಳ ಜೊತೆಗೆ ಮಕ್ಕಳನ್ನು ಯಾವ ರೀತಿಯಲ್ಲಿ ಸಂಸ್ಕಾರಯುತರನ್ನಾಗಿ ಮಾಡಬಹುದು. ಇದರೊಂದಿಗೆ ಉತ್ತಮ ಸಮಾಜವನ್ನು ಹೇಗೆ ಕಟ್ಟಬಹುದು ಎಂಬುದನ್ನು ವಿವರವಾಗಿ ತಿಳಿಸಿದರು. ಹಾಗೆ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಢ ಭಾರತ ನಿರ್ಮಿಸುವಲ್ಲಿ ತಮ್ಮ ಜವಾಬ್ದಾರಿಯನ್ನು ಯಾವ ರೀತಿ ನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಯುಕ್ತ ಜನನಿ ಮಹಿಳಾ ಮಂಡಳಿಯ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ, ಗಾದೆಯನ್ನು ಪೂರ್ಣಗೊಳಿಸುವುದು, ಅಕ್ಷರ ಬಂಧ, ಆಶುಭಾಷಾ ಸ್ಪರ್ಧೆ ಮುಂತಾದವುಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಜನನಿ ಮಹಿಳಾ ಮಂಡಳಿಯ ಉಪಾಧ್ಯಕ್ಷೆ ಹೇಮಾವತಿ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರೆ, ನಿರ್ದೆಶಕಿ ಪ್ರೇಮ ಸ್ವಾಗತಿಸಿ, ಖಜಾಂಚಿ ಜಯಪಾಲಕ್ಷ ವಂದಿಸಿದರು. ಅಧ್ಯಕ್ಷೆ ರಾಣಿ ಅರುಣ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.