ಸುಂಟಿಕೊಪ್ಪ, ಮಾ. ೨೬: ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ದೇವಸ್ಥಾನದ ೫೭ನೇ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ಹೋಮ ದೊಂದಿಗೆ ವೈದಿಕ ಕೈಂಕರ್ಯಗಳಿಗೆ ಚಾಲನೆ ನೀಡಲಾಯಿತು.

ಸಂಜೆ ಗಣಪತಿ ಪೂಜೆ, ಸುಬ್ರಹ್ಮಣ್ಯ ದೇವರ ಪೂಜೆ, ಮುತ್ತಪ್ಪ ದೇವರಿಗೆ ಪೈಂಗುತ್ತಿ, ರಾತ್ರಿ ಚಾಮುಂಡೇಶ್ವರಿ ಪೂಜೆ, ಗುಳಿಗನ ಪೂಜೆ,ಭದ್ರಕಾಳಿ ದೇವಿಗೆ ಅರ್ಚನೆ ಮತ್ತು ನೈವೇದ್ಯ ಪೂಜೆ ನೆರವೇರಿತು. ಸುಂಟಿಕೊಪ್ಪ, ಮಾ. ೨೬: ಕೊಡಂಗಲ್ಲೂರು ಭದ್ರಕಾಳಿ ಕುರುಂಬ, ಭಗವತಿ ದೇವಸ್ಥಾನದ ೫೭ನೇ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ಹೋಮ ದೊಂದಿಗೆ ವೈದಿಕ ಕೈಂಕರ್ಯಗಳಿಗೆ ಚಾಲನೆ ನೀಡಲಾಯಿತು.

ಸಂಜೆ ಗಣಪತಿ ಪೂಜೆ, ಸುಬ್ರಹ್ಮಣ್ಯ ದೇವರ ಪೂಜೆ, ಮುತ್ತಪ್ಪ ದೇವರಿಗೆ ಪೈಂಗುತ್ತಿ, ರಾತ್ರಿ ಚಾಮುಂಡೇಶ್ವರಿ ಪೂಜೆ, ಗುಳಿಗನ ಪೂಜೆ,ಭದ್ರಕಾಳಿ ದೇವಿಗೆ ಅರ್ಚನೆ ಮತ್ತು ನೈವೇದ್ಯ ಪೂಜೆ ನೆರವೇರಿತು. ಮೆರವಣಿಗೆ ಮೂಲಕ ಸಾಗಿ ನಂತರ ದೇವಾಲಯದಲ್ಲಿ ಸಮಾಪ್ತಿಗೊಂಡಿತು.

೯.೩೦ ಗಂಟೆಯಿAದ ವಸೂರಿಮಾಲೆ ದೇವರ ಬೆಳ್ಳಾಟಂ ಮತ್ತು ದೇವಿಯ ದರ್ಶನ ನಡೆಯಿತು. ನಂತರ ದೇವಿಗೆ ತಮ್ಮ ಬೇಡಿಕೆ ಮತ್ತು ಹರಕೆ ಸಲ್ಲಿಸುವ ಮೂಲಕ ಭಕ್ತಾದಿಗಳು ಸಂತೃಪ್ತಗೊAಡರು.

ಮಹಾಮAಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಬುಧವಾರ ಬೆಳಿಗ್ಗೆ ೯ ಗಂಟೆಗೆ ದೇವಿ ಹರಕೆ, ೧೦ ರಿಂದ ೧೧ ಗಂಟೆಯವರೆಗೆ ದೇವಿಗೆ ಅರ್ಪಣೆ ಮತ್ತು ಅನ್ನಸಂತರ್ಪಣೆ ನಡೆಯಿತು.

ಸುಂಟಿಕೊಪ್ಪ, ಗದ್ದೆಹಳ್ಳ, ಬಾಳೆಕಾಡು, ಕೆದಕಲ್, ಕಂಬಿಬಾಣೆ, ನಾಕೂರು ಶಿರಂಗಾಲ, ಮಾದಾಪುರ ಸೇರಿದಂತೆ ಕೇರಳ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು.