ಮಡಿಕೇರಿ, ಮೇ ೨೧: ಮಡಿಕೇರಿ ಹೊರವಲಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಅಬ್ಬಿಫಾಲ್ಸ್ನಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬAಧಿಸಿದAತೆ ಮೂವರ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಬ್ಬಿಫಾಲ್ಸ್ನಲ್ಲಿ ವಾಹನ ಸುಂಕ ಸಂಗ್ರಹ ಮಾಡುವ ಸುಬ್ಬಯ್ಯ, ಭರತ್ ರೈ ಹಾಗೂ ಸ್ಥಳೀಯ ಪ್ರಜ್ವಲ್ ಎಂಬವರು ಬಂಧಿತ ಆರೋಪಿಗಳು.

ತಾ. ೨೦ ರಂದು ಅಬ್ಬಿಫಾಲ್ಸ್ಗೆ ಪ್ರವಾಸಕ್ಕೆ ಬಂದವರ ಮೇಲೆ ಕ್ಷÄಲ್ಲಕ ಕಾರಣಕ್ಕೆ ಆರೋಪಿಗಳು ಕಾರನ್ನು ತಡೆದು ದೊಣ್ಣೆಯಿಂದ ಹಿಗ್ಗಾಮುಗ್ಗ ಥಳಿಸಿದ್ದರು.

(ಮೊದಲ ಪುಟದಿಂದ) ಪ್ರವಾಸಿಗರು ಪೊಲೀಸ್ ಠಾಣೆಗೆ ದೂರು ನೀಡದೆ ತೆರಳಿದ್ದರು. ಹಲ್ಲೆ ಮಾಡುತ್ತಿರುವ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ಬಳಿಕ ಪೊಲೀಸರು ಎಚ್ಚೆತ್ತುಕೊಂಡು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿ ಸ್ವಯಂ ಪ್ರೇರಿತ ಪ್ರಕರಣ (ಸುಮೊಟೋ) ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಸೆಕ್ಷನ್ ೧೬೦ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.