ಗೋಣಿಕೊಪ್ಪಲು, ಮೇ ೨೧: ಕಾಫಿ ತೋಟದಲ್ಲಿ ಮನುಷ್ಯನ ಕಾಲೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಮAಗಲ ಠಾಣಾ ವ್ಯಾಪ್ತಿಯ ಬೆಳ್ಳೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಮನುಷ್ಯನ ಕಾಲು ಪತ್ತೆಯಾಗಿದೆ. ಸುದ್ದಿ ತಿಳಿದ ತೋಟದ ಮಾಲೀಕರು ಶ್ರೀಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಶ್ರೀಮಂಗಲ ಪೋಲಿಸರು ಕಾಫಿ ತೋಟದ ಸುತ್ತಲೂ ಹುಡುಕಾಟ ನಡೆಸಿದ್ದಾರೆ. ಆದರೆ ಕಾಲು ಹೊರತುಪಡಿಸಿ

(ಮೊದಲ ಪುಟದಿಂದ) ಬೇರೆ ಯಾವುದೇ ಕುರುಹು ಪತ್ತೆಯಾಗಲಿಲ್ಲ.

ಕಾಲನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣ ದಾಖಲಿಸಿ ಕಾಲನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠ್ಠಾಧಿಕಾರಿ, ವೀರಾಜಪೇಟೆ ಡಿ.ವೈ.ಎಸ್.ಪಿ, ಕುಟ್ಟ ವೃತ್ತ ನಿರೀಕ್ಷಕ, ಠಾಣಾಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿದ್ದರು.

-ಹೆಚ್.ಕೆ. ಜಗದೀಶ್