ಗುಡ್ಡೆಹೊಸೂರು, ಮೇ ೨೮: ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವತಿಯಿಂದ ಇಲ್ಲಿನ ಸಮುದಾಯ ಭವನದಲ್ಲಿ ಗ್ರಾಮೀಣ ಬೇಸಿಗೆ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದ ಉದ್ಘಾಟನೆಯನ್ನು ಪಂಚಾಯಿತಿ ಅಧ್ಯಕೆÀ್ಷ ನಂದಿನಿ ನೆರವೇರಿಸಿದರು.

ಈ ಸಂದರ್ಭ ಪಿ.ಡಿ.ಓ ಶ್ಯಾಂ ತಮ್ಮಯ್ಯ ಮತ್ತು ಕಾರ್ಯದರ್ಶಿ ಕುಮಾರಸ್ವಾಮಿ ಮುಂತಾದವರು ಹಾಜರಿದ್ದರು. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು.