ಮಡಿಕೇರಿ, ಜೂ. ೫: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯು ಕೈಕೇರಿಯಾ ವಿಪ್ರ ಸಭಾ ಭವನದಲ್ಲಿ ಸಂಘದ ಅಧ್ಯಕ್ಷÀ ಶ್ರೀ ರಾಘವೇಂದ್ರ ವೈಲಯ ಅವರ ಅಧ್ಯಕ್ಷತೆ ಯಲ್ಲಿ ಜರುಗಿತು. ಬೆಳಿಗ್ಗೆ ೭ ಗಂಟೆಗೆ ಗಣಹೋಮ, ನಂತರ ಸತ್ಯನಾರಾಯಣ ಪೂಜೆ ನಡೆದು, ನಂತರ ತೀರ್ಥ ಪ್ರಸಾದ ವಿತರಣೆ, ಸಹಭೋಜನ ವ್ಯವಸ್ಥೆ ಕಲ್ಪಿಸಲಾಯಿತು.
ಈ ಸಂದರ್ಭ ಮಹಾಸಭೆಯಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿಪ್ರ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗೌರವಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಸ್ವಾಗತಿಸಿ, ನಿರೂಪಿಸಿದರು.
ಮುಂದಿನ ದಿನಗಳಲ್ಲಿ ಈಗಿರುವ ಸಭಾಭವನವನ್ನು ವಿಸ್ತರಿಸಿ ಕಾರ್ಯಕ್ರಮಗಳಿಗೆ ಅನುಕೂಲವಾಗು ವಂತೆ ಅಂದಾಜು ವೆಚ್ಚ ಅರುವತ್ತು ಲಕ್ಷ ರೂಪಾಯಿಗಳಲ್ಲಿ ವಿಸ್ತಾರವಾದ ಸಭಾಂಗಣವನ್ನು ನಿರ್ಮಿಸುವಂತೆ ಈ ಸಂದರ್ಭ ನಿರ್ಣಯ ಕೈಗೊಳ್ಳ ಲಾಯಿತು.