ಮಡಿಕೇರಿ, ಜೂ. ೬: ವೀರಾಜಪೇಟೆ ವಿಭಾಗದ ವೀರಾಜಪೇಟೆ ಅರಣ್ಯ ವಲಯದ ಅಮ್ಮತ್ತಿ ಶಾಖೆಯ ವ್ಯಾಪ್ತಿಗೆ ಬರುವ ಗ್ರಾಮಗಳಾದ ಒಂಟಿಯAಗಡಿ, ಹಾಲುಗುಂದ, ಬೈರಂಬಾಡ, ಹಚ್ಚಿನಾಡು, ಗುಹ್ಯ, ಇಂಜಲಗೆರೆ, ಪುಲಿಯೇರಿ, ಕಣ್ಣಂಗಾಲ, ಸಿದ್ದಾಪುರ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ತಾ ೭ ರಂದು ಹಮ್ಮಿಕೊಂಡಿದ್ದು, ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.