ವೀರಾಜಪೇಟೆ, ಜೂ. ೫: ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡು, ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದಿರುವ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಇತ್ತಿಚೆಗೆ ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾದ ಕೊಡವ ರೈಡರ್ಸ್ ಕ್ಲಬ್ ಪ್ರಮುಖರು ವಿವಿಧ ಬೇಡಿಕೆಯನ್ನು ಮುಂದಿಟ್ಟರು.

ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಮೂಲಕ ಜಿಲ್ಲೆಯ ಜನರ ಪ್ರಾಣ ರಕ್ಷಣೆ ಮುಂದಾಗಬೇಕು ಎಂಬ ಬೇಡಿಕೆಯೊಂದಿಗೆ, ಕೊಡಗಿನ ಪ್ರಮುಖ ಬೆಳೆಗಳಾದ ಭತ್ತ, ಕಾಫಿ ಹಾಗೂ ಕರಿಮೆಣಸಿನ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಒತ್ತಾಯ ಹೇರಬೇಕು ಎಂಬ ಮನವಿಯನ್ನು ಮುಂದಿಟ್ಟರು.

ಈ ಸಂದರ್ಭದಲ್ಲಿ ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟೀರ ಪೃಥ್ವಿ ಸುಬ್ಬಯ್ಯ, ಕಾರ್ಯದರ್ಶಿ ಸಣ್ಣುವಂಡ ದರ್ಶನ್ ಕಾವೇರಪ್ಪ, ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಗಾನ ಸುಬ್ಬಯ್ಯ, ಪ್ರಮುಖರಾದ ಮುರುವಂಡ ಸುಮಾ ಕುಟ್ಟಪ್ಪ, ಮೂಕಚಂಡ ಶಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.