ಮಡಿಕೇರಿ, ಜೂ. ೬ : ಜಿಲ್ಲೆಯ ೧೦೩ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ತಾ. ೧೨ ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ. ಆದ್ದರಿಂದ ಆಯಾಯ ತಾಲೂಕಿಗೆ ಸಂಬAಧಿಸಿದ ಗ್ರಾ.ಪಂ. ಸದಸ್ಯರು ಮೀಸಲಾತಿ ನಿಗದಿಪಡಿಸುವ ಸಭೆಗೆ ಆಗಮಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕೊಡಗು ಜಿಲ್ಲೆಯ ಐದು ತಾಲೂಕುಗಳ ಎಲ್ಲಾ ಗ್ರಾ.ಪಂ.ಗಳ ಚುನಾಯಿತ ಸದಸ್ಯರುಗಳ ಸಮ್ಮುಖದಲ್ಲಿ ಗ್ರಾ.ಪಂ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ಸ್ಥಾನ ನಿಗದಿಪಡಿಸಲಾಗುತ್ತದೆ. ಆ ದಿಸೆಯಲ್ಲಿ ತಾ. ೧೨ ರಂದು ಬೆಳಿಗ್ಗೆ ೧೧ ಗಂಟೆಗೆ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ಮಧ್ಯಾಹ್ನ ೩ ಗಂಟೆಗೆ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಪರಿಮಳ ಮಂಗಳ ವಿಹಾರದಲ್ಲಿ ಸಭೆ ನಡೆಯಲಿದೆ.

ತಾ. ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಕುಶಾಲನಗರ ಎಪಿಸಿಎಂಸಿ ಸಭಾಂಗಣ, ಮಧ್ಯಾಹ್ನ ೩ ಗಂಟೆಗೆ ಸೋಮವಾರಪೇಟೆಯ ಜಾನಕಿ ಕನ್ವೆನ್ಷನ್ ಹಾಲ್‌ನಲ್ಲಿ ಸಭೆ ನಡೆಯಲಿದೆ. ತಾ. ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ರಾಜ್ಯ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ತಾಲೂಕಿನ ಗ್ರಾ.ಪಂ.ಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆ, ಸ್ಥಾನದ ವರ್ಗವಾರು ಸಂಖ್ಯೆಯನ್ನು ನಿಗಧಿ ಮಾಡಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನಲ್ಲಿ ೨೬ ಗ್ರಾ.ಪಂ. ಗಳಿದ್ದು, ಅದರಲ್ಲಿ ೧೩ ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿ ೨ (ಒಬ್ಬ ಮಹಿಳೆ), ಅನುಸೂಚಿತ ಪಂಗಡ ೧ (ಮಹಿಳೆ), ಹಿಂದುಳಿದ ವರ್ಗ (ಅ) ೭ (೪ ಮಹಿಳೆ), ಹಿಂದುಳಿದ ವರ್ಗ (ಬ) ೨ (೧ ಮಹಿಳೆ), ಸಾಮಾನ್ಯ ೧೪ (೬ ಮಹಿಳೆ) ನಿಗದಿ ಮಾಡಲಾಗಿದೆ. ವೀರಾಜಪೇಟೆಯಲ್ಲಿ ೧೭ ಗ್ರಾಮ ಪಂಚಾಯಿತಿಗಳಿದ್ದು, ೯ ಮಹಿಳೆಯರಿಗೆ ನಿಗಧಿಯಾಗಿದೆ. ಅನುಸೂಚಿತ ಜಾತಿ ೨ (೧ ಮಹಿಳೆ), ಅನುಸೂಚಿತ ಪಂಗಡ ೨(೧ ಮಹಿಳೆ), ಹಿಂದುಳಿದ ವರ್ಗ ೩(೨ ಮಹಿಳೆ), ಹಿಂದುಳಿದ ವರ್ಗ (ಬ) ೧, ಸಾಮಾನ್ಯ ೯ (೫ ಮಹಿಳೆ) ಮೀಸಲಾಗಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ೨೩ ಗ್ರಾ.ಪಂ. ಗಳಿದ್ದು, ಇದರಲ್ಲಿ ೧೨ ಗ್ರಾ.ಪಂ.ಗಳು ಮಹಿಳೆಯರಿಗೆ ಮೀಸಲಾಗಿದೆ. ಅನುಸೂಚಿತ ಜಾತಿಯಲ್ಲಿ ೩ (೨ ಮಹಿಳೆ), ಅನುಸೂಚಿತ ಪಂಗಡ ೧ ಮಹಿಳೆ, ಹಿಂದುಳಿದ(ಅ) ೬(೩ ಮಹಿಳೆ), ಹಿಂದುಳಿದ (ಬ) ೧ ಮಹಿಳೆಯರಿಗೆ, ಸಾಮಾನ್ಯ ೧೨ ರಲ್ಲಿ ೫ ಮಹಿಳೆಯರಿಗೆ ಮೀಸಲಾಗಿದೆ. ಕುಶಾಲನಗರ ತಾಲೂಕಿನಲ್ಲಿ ೧೬ ಗ್ರಾ.ಪಂ. ಗಳಿದ್ದು, ೮ ಮಹಿಳೆಯರಿಗೆ ಮೀಸಲಾಗಿದೆ. ಅನುಸೂಚಿತ ಜಾತಿ ೨(೧ ಮಹಿಳೆ), ಅನುಸೂಚಿತ ಪಂಗಡ ೧ (೧ ಮಹಿಳೆ), ಹಿಂದುಳಿದ ವರ್ಗ (ಅ) ೪ (೨ ಮಹಿಳೆಗೆ), ಹಿಂದುಳಿದ ವರ್ಗ (ಬ) ೧ (೧ ಮಹಿಳೆಗೆ) ಸಾಮಾನ್ಯ ೮(೩ ಮಹಿಳೆ) ಮೀಸಲಾಗಿದೆ.

ಹಾಗೆಯೇ ಪೊನ್ನಂಪೇಟೆ ತಾಲೂಕಿನಲ್ಲಿ ೨೧ ಗ್ರಾಮ ಪಂಚಾಯಿತಿಗಳಿದ್ದು, ೧೧ ಮಹಿಳೆಯರಿಗೆ ಮೀಸಲಾಗಿದೆ. ಅನುಸೂಚಿತ ಜಾತಿ ೧ (೧ ಮಹಿಳೆ), ಅನುಸೂಚಿತ ಪಂಗಡ ೫ (೩ ಮಹಿಳೆಯರಿಗೆ), ಹಿಂದುಳಿದ ವರ್ಗ (ಅ) ೩ (೨ ಮಹಿಳೆಯರಿಗೆ), ಹಿಂದುಳಿದ ವರ್ಗ (ಬ) ೧, ಸಾಮಾನ್ಯ ೧೧ ರಲ್ಲಿ ೫ ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾಹಿತಿ ನೀಡಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬAಧಿಸಿದAತೆ ಮತದಾರರ ಪಟ್ಟಿಯನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿ ೨೫ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು, ಹಾಗೆಯೇ ೫೦ ತಾಲೂಕು ಪಂಚಾಯಿತಿ ಕ್ಷೇತ್ರಗಳು ಇವೆ.

ಮಡಿಕೇರಿ ತಾಲೂಕಿನಲ್ಲಿ ೬ ಜಿ.ಪಂ., ೧೨ ತಾ.ಪಂ. ಕ್ಷೇತ್ರಗಳು, ಸೋಮವಾರಪೇಟೆ ತಾಲೂಕಿನಲ್ಲಿ ೫ ಜಿ.ಪಂ.೯ ತಾ.ಪಂ. ಕ್ಷೇತ್ರಗಳು, ವೀರಾಜಪೇಟೆ ತಾಲೂಕಿನಲ್ಲಿ ೪ ಜಿ.ಪಂ. ಕ್ಷೇತ್ರಗಳಿದ್ದು, ೯ ತಾ.ಪಂ. ಕ್ಷೇತ್ರಗಳಿವೆ. ಕುಶಾಲನಗರ ತಾಲೂಕಿನಲ್ಲಿ ೫ ಜಿ.ಪಂ. ಕ್ಷೇತ್ರಗಳೀದ್ದು, ೯ ತಾ.ಪಂ. ಕ್ಷೇತ್ರಗಳಿವೆ. ಪೊನ್ನಂಪೇಟೆ ತಾಲೂಕಿನಲ್ಲಿ ೫ ಜಿ.ಪಂ. ಮತ್ತು ೧೧ ತಾ.ಪಂ. ಕ್ಷೇತ್ರಗಳಿವೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

ರಾಜ್ಯ ಚುನಾವಣಾ ಆಯೋಗವು ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-೨೦೨೩ಕ್ಕೆ ಸಂಬAಧಿಸಿ ದಂತೆ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ತಯಾರಿಸಲು ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯು ಏಕಕಾಲದಲ್ಲಿ ನಡೆಯುವುದರಿಂದ ಹಾಗೂ ಒಂದೇ ಮತದಾರರ ಪಟ್ಟಿ ಉಪಯೋಗಿಸುವುದರಿಂದ, ಮತದಾರರ ಪಟ್ಟಿಯು ಸಂಬAಧಪಟ್ಟ ಉಪ ವಿಭಾಗಾಧಿಕಾರಿಗಳ ಹಾಗೂ ತಾಲೂಕು ತಹಶೀಲ್ದಾರರ ಸಹಿ ಪದನಾಮ ಒಳಗೊಂಡಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಚುನಾವಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು, ಪ್ರದೇಶಗಳಲ್ಲಿ ಅಗತ್ಯತೆಗೆ ತಕ್ಕಂತೆ ಕನಿಷ್ಟ ೪೦೦ ರಿಂದ ೧೫೦೦ ಮತದಾರರು ಇರುವಂತೆ ಮತದಾರರ ಪಟ್ಟಿ ತಯಾರಿಸಲಾಗುತ್ತದೆ ಎಂದರು.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ದಿನಾಂಕ ೦೧-೦೧-೨೦೨೩ ರ ಅರ್ಹತಾ ದಿನಾಂಕಕ್ಕೆ ಸಂಬAಧಿಸಿದAತೆ ದಿನಾಂಕ:೦೫-೦೧-೨೦೨೩ ರಂದು ಅಂತಿಮ ಮತದಾರರ ಪಟ್ಟಿಯನ್ನು ಹಾಗೂ ದಿನಾಂಕ ೨೦-೦೪-೨೦೨೩ರ ಪೂರಕ ಪಟ್ಟಿಯ ಡಾಟಾವನ್ನು ಅಳವಡಿಸಿಕೊಂಡು ತಯಾರಿಸಲಾಗುತ್ತದೆ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ತಯಾರಿಸಲಾದ ಮತದಾರರ ಪಟ್ಟಿಗೆ ನೇರವಾಗಿ ಹೆಸರು ಸೇರ್ಪಡೆ ಮಾಡಲು ಅವಕಾಶವಿರುವುದಿಲ್ಲ ಎಂದರು.

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನದವರೆಗೂ ವಿಧಾನಸಭಾ ಮತದಾರರ ಪಟ್ಟಿಯ ನೋಂದಣಾಧಿಕಾರಿಗಳು ನಿಯ ಮಾನುಸಾರ ಅಂಗೀಕರಿಸುವ, ಸೇರ್ಪಡೆ, ಬಿಡತಕ್ಕ ಮತ್ತು ತಿದ್ದುಪಡಿ ಗಳನ್ನು ಅಳವಡಿಸಿಕೊಂಡು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮತದಾರರ ಪಟ್ಟಿಗೆ ಪೂರಕ ಪಟ್ಟಿಯನ್ನು ಸಿದ್ಧಪಡಿಸಿ ಕೊಳ್ಳಲಾಗು ತ್ತದೆ. ೧೫೦೦ಕ್ಕೂ ಹೆಚ್ಚಿಗೆ ಮತದಾರರನ್ನು ಹೊಂದಿರುವ ಮತಗಟ್ಟೆಯನ್ನು ವಿಭಜಿಸಿ ಹೆಚ್ಚುವರಿ ಮತಗಟ್ಟೆಯನ್ನು ರಚಿಸಲಾಗುವುದು.

ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆ) ನಿಯಮಗಳು ೧೯೯೩ರ ನಿಯಮ ೪೨(ಎ) ರಂತೆ ಸೇವಾ ಮತದಾರರು ಅಂಚೆ ಮೂಲಕ ಮತ ನೀಡಲು ಹಕ್ಕುಳ್ಳವರಾಗಿರುತ್ತಾರೆ. ಆದ್ದರಿಂದ ವಿಧಾನಸಭಾ ಕ್ಷೇತ್ರದ ಕೊನೆಯ ಭಾಗವಾದ ಸೇವಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರವಾರು ಸೇವಾ ಮತದಾರರ ಪಟ್ಟಿ ತಯಾರಿಸಲಾಗುತ್ತದೆ. ಮತದಾರರ ಪಟ್ಟಿ ಗಣಕೀಕರಣ ಮತ್ತು ಮುದ್ರಣ ಸಂಬAಧ ತಾ. ೧೩ ರವರೆಗೆ ಮುದ್ರಕರಿಂದ ಪ್ರಥಮ ಚೆಕ್‌ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸುವುದು. ಪರಿಶೀಲನೆಯ ನಂತರ ಪ್ರಥಮ ಚೆಕ್‌ಲಿಸ್ಟ್ನಲ್ಲಿ ಆಗಬೇಕಾಗಿರುವ ಬದಲಾವಣೆಗಳನ್ನು ಮುದ್ರಕರಿಂದ ಮಾಡಿಸಿ ಕರಡು ಮತದಾರರ ಪಟ್ಟಿಯ ಪ್ರತಿಗಳನ್ನು ಮುದ್ರಕರಿಂದ ಪಡೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿ.ಪಂ. ಮತ್ತು ತಾ.ಪಂ. ಚುನಾವಣೆ ಸಂಬAಧ ತಾ. ೧೪ ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ತಾ. ೧೯ ರಂದು ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ತಾ. ೨೨ ರಂದು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಕೊನೆಯ ದಿನವಾಗಿದೆ. ತಾ. ೨೫ ರಂದು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಯನ್ನು ಮಾಡಿಸಿ ಅಂತಿಮ ಚೆಕ್‌ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುತ್ತದೆ. ತಾ. ೨೭ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜನವರಿ, ೦೧, ೨೦೨೪ ರಲ್ಲಿ ಅರ್ಹತಾ ದಿನಾಂಕದAತೆ ಭಾವಚಿತ್ರ ವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕೈಗೊಳ್ಳಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಹೊರಡಿಸಿದೆ ಎಂದು ಡಾ.ಬಿ.ಸಿ. ಸತೀಶ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಚುನಾವಣಾ ತಹಶೀಲ್ದಾರ್ ಸಿ.ಜಿ. ರವಿಶಂಕರ, ಇತರರು ಇದ್ದರು.