ಮಡಿಕೇರಿ, ಆ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗಿನ ಗೌರಮ್ಮ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯನ್ನು ತಾ. ೨೪ರಂದು ಮಡಿಕೇರಿಯ ಜೂನಿಯರ್ ಕಾಲೇಜು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಅಲ್ಲದೆ ನಾ ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯನ್ನು ತಾ.೨೫ರಂದು ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಸ್ಪರ್ಧಿಸುವ ವಿದ್ಯಾರ್ಥಿಗಳು ಆ ದಿನ ಬೆಳಿಗ್ಗೆ ೧೦ ಗಂಟೆಗೆ ತಮ್ಮ ಶಾಲೆಯ ಅಥವಾ ಕಾಲೇಜಿನ ಅನುಮತಿ ಪತ್ರದೊಂದಿಗೆ ಹಾಜರಿರತಕ್ಕದ್ದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.