ಚೆಯ್ಯಂಡಾಣೆ, ಆ. ೧೭: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಕೇರಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ವಫ್ಟ್ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಹಾನಿಗೊಳಿಸಿದೆ.
ನೆಲ್ಲಮಕ್ಕಡ ವಿವೇಕ್ ಅವರ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಕಾರಿಗೆ ಒಂಟಿ ಸಲಗ ದಾಳಿ ನಡೆಸಿದೆ. ಕಳೆದ ಕೆಲ ದಿನಗಳ ಹಿಂದೆ ವಿವೇಕ್ ಅವರ ಮತ್ತೊಂದು ವಾಹನಕ್ಕೆ ಕಾಡಾನೆ ಹಿಂಡು ದಾಳಿ ನಡೆಸಿತ್ತು.
ದಾಳಿಗೊಳಗಾದ ವಾಹನದ ಮಾಲೀಕ ಶಕ್ತಿಯೊಂದಿಗೆ ಪ್ರತಿಕ್ರಿಯಿಸಿ ತೋಟದಲ್ಲಿ ಕಾಡಾನೆ ದಾಳಿ ನಡೆಸುತ್ತಿದ್ದು, ಕಾಫಿ, ಅಡಿಕೆ, ಬಾಳೆ, ಒಳ್ಳೆಮೆಣಸು ಗಿಡಗಳನ್ನು ತುಳಿದು ನಾಶ ಪಡಿಸುತ್ತಿದೆ.
ಅಲ್ಲದೆ ೨ ಬಾರಿ ವಾಹನಕ್ಕೆ ಹಾನಿಯಾಗಿದೆ. ಮನೆಯಿಂದ ಹೊರಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಕೂಡಲೇ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆ ಹಿಡಿಯಬೇಕೆಂದು ಒತ್ತಾಯಿಸಿದರು.