ಮಡಿಕೇರಿ, ಆ. ೨೫: ಕೊಡಗು ಜಿಲ್ಲೆ ವೀರಾಜ ಪೇಟೆ ತಾಲೂಕಿನ ಸಾಮರ್ಥ್ಯ ಸೌಧದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ. ಸಿಇಓ ವರ್ಣಿತ್ ನೇಗಿರವರ ನೇತೃತ್ವದಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಗತಿ ಕುಂಠಿಗೊAಡಿದ್ದು ತ್ವರಿತವಾಗಿ ಪ್ರಗತಿ ಸಾಧಿಸಿ, ಗ್ರಾಮ ಪಂಚಾಯಿತಿಗಳಲ್ಲಿ ಶೂನ್ಯ ಮಾನವ ದಿನಗಳ ಸೃಜನೆಯಾಗದಂತೆ ಕ್ರಮ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಾರತ್ ನಿರ್ಮಾಣ್ ಸೇವಾ ಕೇಂದ್ರ, ‘ಓಖಐಒ Wಔಖಏ Sಊಇಆ’ ಕಾಮಗಾರಿ ಗಳನ್ನು ಆರ್ಥಿಕ ವರ್ಷದಲ್ಲೆ ಪೂರ್ಣ ಗೊಳಿಸಲು ತಿಳಿಸಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಸಂಬAಧಿಸಿದAತೆ ಗ್ರಾಮ ಪಂಚಾಯಿತಿಗಳಲ್ಲಿ ಕಸವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿ.ಪಂ.ಸಿಇಓ ಅವರು ಹೇಳಿದರು.
ವಸತಿ ಯೋಜನೆಯಡಿ ತಾಲೂಕಿನಲ್ಲಿ ಮಳೆಗೆ ಹಾನಿಯಾದ ಮನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಸಾಧಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ವರ್ಣಿತ್ ನೇಗಿ ಅವರು ಸೂಚಿಸಿದರು. ಜಿ.ಪಂ. ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಕಾಲಮಿತಿ ಒಳಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿ ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೀರಾಜಪೇಟೆ ತಾ.ಪಂ. ಇಓ ಕೆ.ಸಿ. ಅಪ್ಪಣ್ಣ, ವೀರಾಜಪೇಟೆ-ಪೊನ್ನಂಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಿಬ್ಬಂದಿಗಳು ಹಾಗೂ ತಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.