ಮಡಿಕೇರಿ, ಸೆ. ೧೬ : ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕೊಟ್ಟೂರು ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ನಾಟೋಳಂಡ ವಿಜು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮಡಿಕೇರಿ ಜೂನಿಯರ್ ಕಾಲೇಜು ನಿವೃತ್ತ ಪ್ರಾಂಶುಪಾಲೆ ಬಡ್ಡಿರ ನಳಿನಿ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಚೇರಂಬಾಣೆ ಕ್ಲಸ್ಟರ್‌ನ ವೀಣಾ ರೈ, ಬೇಂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಟ್ಟಮಾಡ ಮಿಲನ್ ಮುತ್ತಣ್ಣ, ಬಾಳೆಯಡ ದಿವ್ಯ ಮಂದಪ್ಪ, ಅರುಣಾ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಲೋಕೇಶ್, ಉದಯ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಸತೀಶ್ ಹಾಜರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಕವನ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಸುಮಾ ವಂದಿಸಿದರು. ಚೇರಂಬಾಣೆ ಕ್ಲಸ್ಟರ್‌ನ ಸುಮಾರು ೧೮ ಶಾಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.