ವೀರಾಜಪೇಟೆ, ಸೆ. ೧೬: ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ, ಕಲೋತ್ಸವಗಳನ್ನು ಪ್ರಾರಂಭಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾ ಧಿಕಾರಿ ಎಂ. ಪ್ರಕಾಶ್ ಹೇಳಿದರು.

ಆರ್ಜಿ ಗ್ರಾಮದ ಪೆರಂಬಾಡಿಯ ಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂ ಗಣದಲ್ಲಿ ನಡೆದ ವೀರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಇದನ್ನು ಗುರುತಿ ಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು ಎಂದು ತಿಳಿಸಿದರು.

ಅತಿಥಿಯಾಗಿದ್ದ ಕುಟ್ಟಂದಿ ಶಾಲೆಯ ಮುಖ್ಯ ಶಿಕ್ಷಕಿ ದೀಪಾ ಮಾತನಾಡಿ, ಕಲೋತ್ಸವ ಕಾರ್ಯಕ್ರಮವು ನಮ್ಮ ನಾಡಿನ ಸಂಸ್ಕöÈತಿ ಬಿಂಬಿಸುವ ಸ್ಪರ್ಧೆಯಾಗಿದೆ. ಪ್ರತಿಭಾ ಕಾರಂಜಿ ಮತ್ತು ಕಲೋ ತ್ಸವಗಳು ಪಠ್ಯದ ಜತೆಗೆ ಮಕ್ಕಳಿಗೆ ಅವಶ್ಯಕವಾಗಿದೆ. ಎಲ್ಲ ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಅಡಗಿರು ತ್ತದೆ. ಸಿಕ್ಕಿದ ಅವಕಾಶಗಳನ್ನು ಧೈರ್ಯದಿಂದ ಬಳಸಿಕೊಂಡು ಕೀರ್ತಿ ತರಬೇಕು ಎಂದರು.

ಸAತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಮಾತನಾಡಿ, ಮಕ್ಕಳು ಸ್ಪರ್ಧಾ ಮನೋಭಾವದಿಂದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಬೇಕು. ಕಲಾ ಪ್ರದರ್ಶನ ನೀಡಿ ತಮ್ಮ ಪ್ರತಿಭೆ ಯನ್ನು ಹೊರಹಾಕಬೇಕು ಎಂದರು.

ಸಭೆಯ ಗೌರವ ಅಧ್ಯಕ್ಷತೆಯನ್ನು ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ ವಹಿಸಿದ್ದರು.

ಅತಿಥಿಗಳಾಗಿ ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯ ಉಪೇಂದ್ರ, ಕೆ.ಟಿ. ಬಷೀರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ, ಹೆಗ್ಗಳ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ಬೇಟೋಳಿ ಶಾಲೆಯ ಮುಖ್ಯ ಶಿಕ್ಷಕಿ ಸೀತಾ, ಅಮ್ಮತ್ತಿ ಒಂಟಿಯAಗಡಿ ಕ್ಲಸ್ಟರ್‌ನ ಶುಷಾ, ನಿವೃತ್ತ ಮುಖ್ಯ ಶಿಕ್ಷಕಿ ವಾರಿಜಾ ಬಾಯಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್‌ಡಿಎಂಸಿ ಸದಸ್ಯೆ ನಮಿತಾ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತಾ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ತಮ್ಮಯ್ಯ, ಕಲ್ತೋಡು ಕ್ಲಸ್ಟರ್‌ನ ಸಿಆರ್‌ಪಿ ವಿ.ಟಿ ವೆಂಕಟೇಶ್, ಬಿಆರ್‌ಪಿ ಗೀತಾಂಜಲಿ, ಸರಕಾರಿ ನೌಕರರ ಸಂಘದ ನಿರ್ದೇ ಶಕ ಮಂಜುನಾಥ್ ಉಪಸ್ಥಿತರಿದ್ದರು.

ಸಭೆಯಲ್ಲಿ ಇತ್ತೀಚೆಗೆ ಕರ್ತವ್ಯದಲ್ಲಿದ್ದು ಮೃತರಾದ ಶಿಕ್ಷಕರಿಗೆ ಸಂತಾಪ ಸೂಚಿಸಲಾಯಿತು.

ಇದೇ ಸಂದರ್ಭ ಎಸ್‌ಎಸ್ ಎಲ್‌ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವೈಷ್ಣವಿ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಲಾಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಅವರನ್ನು ಸನ್ಮಾನಿ ಸಲಾಯಿತು. ವೀರಾಜಪೇಟೆ ಹಾಗೂ ಕಲ್ತೋಡು ಕ್ಲಸ್ಟರ್‌ಗೆ ಸೇರಿದ ಶಾಲೆಗಳ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೇರೆ ಬೇರೆ ವೇದಿಕೆಗಳಲ್ಲಿ ವೈಯಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳು ನಡೆದವು.