ಮಡಿಕೇರಿ, ಸೆ. ೧೯: ಕರ್ನಾಟಕವು ಸುವರ್ಣ ಸಂಭ್ರಮ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ತಾ.೨೮ರಂದು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ "ಸಿರಿ ಸಂಭ್ರಮ" ಎಂಬ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಆಸಕ್ತ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಕವಿಗಳು ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್ (೯೯೮೦೯೮೮೧೨೩), ಕುಡೆಕಲ್ ಸಂತೋಷ್(೯೯೭೨೫೩೮೫೮೪) ಇವರುಗಳನ್ನು ಸಂಪರ್ಕಿಸಬಹುದಾಗಿದೆ.