ಮಡಿಕೇರಿ, ಸೆ.೨೨ : ಮೈಸೂರು ವಲಯದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಕೊಡಗು ಬೃಹತ್ ಕಾಮಗಾರಿ ವಿಭಾಗದ ವತಿಯಿಂದ ಪೊನ್ನಂಪೇಟೆ ತಾಲೂಕಿನಲ್ಲಿರುವ ೩೩/೧೧ ಕೆ.ವಿ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರವನ್ನು ೬೬/೧೧ ಕೆ.ವಿ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರವಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ಪೊನ್ನಂಪೇಟೆ ತಾಲೂಕಿನಲ್ಲಿ ಹಾಲಿ ೬೬/೩೩/೧೧ ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಕೇಂದ್ರದಿAದ ನೂತನ ೬೬/೧೧ ಕೆ.ವಿ ಶ್ರೀಮಂಗಲ ವಿದ್ಯುತ್ ವಿತರಣಾ ಕೇಂದ್ರದವರೆಗೆ ನಿರ್ಮಾಣ ಹಂತದಲ್ಲಿದ್ದ ೧೮.೨೮ ಕಿ.ಮೀ ಉದ್ದದ ೬೬ ಕೆ.ವಿ ಪೊನ್ನಂಪೇಟೆ-ಶ್ರೀಮAಗಲ ಪ್ರಸರಣ ಮಾರ್ಗದ ಕಾಮಗಾರಿ ಕೆಲಸವು ಮುಗಿದಿದ್ದು, ಈ ವಿದ್ಯುತ್ ಮಾರ್ಗವನ್ನು ತಾ. ೨೯ ರಂದು ಅಥವಾ ನಂತರದ ಯಾವುದೇ ದಿನಗಳಲ್ಲಿ ಚಾಲನೆಗೊಳಿಸಲಾಗುವುದು ವಿದ್ಯುತ್ ಹರಿಸಲಾಗುವುದು.
ಈ ಮಾರ್ಗವು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರುಗೂರು, ಮತ್ತೂರು, ಮುಗಟಗೇರಿ, ಬೆಳ್ಳೂರು, ಚಿಕ್ಕಮಂಡೂರು, ಹುದಿಕೇರಿ, ಕೋಣಗೇರಿ, ನಡಿಕೇರಿ, ತೂಚಮಕೇರಿ, ಈಸ್ಟ್ ನೆಮ್ಮಲೆ, ವೆಸ್ಟ್ನೆಮ್ಮಲೆ, ಟಿ.ಶೆಟ್ಟಿಗೇರಿ, ತಾವಳಗೇರಿ ಮತ್ತು ಶ್ರೀಮಂಗಲ ಸುತ್ತಮುತ್ತಲಿನ ಗ್ರಾಮಗಳ ಸರಹದ್ದಿನಲ್ಲಿ ಹಾದು ಹೋಗುತ್ತದೆ.
ಆದ್ದರಿಂದ ಸಾರ್ವಜನಿಕರು ಈ ೬೬ ಕೆವಿ ಮಾರ್ಗದ ವಿದ್ಯುತ್ ಗೋಪುರಗಳ ಮೇಲಿರುವ ವಿದ್ಯುತ್ ವಾಹಕವು ಚಾಲನೆಗೊಳ್ಳುವುದರಿಂದ, ಗೋಪುರಗಳಿಗೆ ದನಕರುಗಳನ್ನು ಮತ್ತು ಇತರೆ ಸಾಕುಪ್ರಾಣಿಗಳನ್ನು ಕಟ್ಟುವುದಾಗಲಿ, ಲೋಹದ ಪಟ್ಟಿಯನ್ನು ತೆಗೆಯುವುದಾಗಲಿ, ಗೋಪುರಗಳನ್ನು ಹತ್ತುವುದಾಗಲಿ, ತಂತಿಗಳನ್ನು ಮುಟ್ಟುವುದಾಗಲಿ, ಗೋಪುರಗಳ ಕೆಳಗೆ ಮರಗಿಡಗಳನ್ನು ನೆಡುವುದಾಗಲಿ, ಗೊಪುರಗಳಿಗೆ ಬಳ್ಳಿ, ತಂತಿ, ಹಗ್ಗ ಮತ್ತಿತರ ಎಸೆಯುವುದಾಗಲಿ, ಗಾಳಿಪಟ ಮುಂತಾದುವುಗಳನ್ನು ಗೋಪುರದ ಹತ್ತಿರ ಹಾರಿಸುವುದಾಗಲಿ ಮಾಡಬಾರದು ಎಂದು ಕೋರಿದೆ. ಹಾಗೆ ಮಾಡುವುದರಿಂದ ತುಂಬಾ ಆಪಾಯಕಾರಿ ಅಫಘಾತ ಮತ್ತು ಪ್ರಾಣಹಾನಿಯಾಗುವ ಸಂಭವವಿರುತ್ತದೆ ಎಂದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ.
ಈ ಸೂಚನೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಉಂಟಾಗುವ ಯಾವುದೇ ತರಹದ ಅಫಘಾತ ಅಥವಾ ಪ್ರಾಣ ಹಾನಿಗೆ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮವು ಜವಾಬ್ದಾರರಲ್ಲ ಎಂದು ಮೈಸೂರು ಕ.ವಿ.ಪ್ರ.ನಿ.ನಿ, ಕೊಡಗು ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.