ಸುಂಟಿಕೊಪ್ಪ, ಸೆ. ೨೩: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸುಂಟಿಕೊಪ್ಪ ಬಿಜೆಪಿ ವತಿಯಿಂದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಮಾದಾಪುರ ರಸ್ತೆಯ ಶ್ರೀವೃಕ್ಷೆÆÃದ್ಭವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಅನಂತರ ‘ಸ್ವಸ್ಥ’ ವಸತಿ ವಿಶೇಷ ಚೇತನರ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ಹಂಚಲಾಯಿತು. ಪ್ರಧಾನಿ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದ ನಂತರ ಭಾರತ ಪ್ರಪಂಚದಲ್ಲಿಯೇ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ದೇಶವಾಗಿದೆ ಎಂದು ಶೃಂಗಸಭೆಯಲ್ಲಿ ವಿವಿಧ ದೇಶದ ಪ್ರಧಾನ ಮಂತ್ರಿಗಳೇ ಮಾತನಾಡಿದ್ದು, ದೇಶಕ್ಕೆ ಪ್ರಧಾನಿ ತಂದ ಹೆಮ್ಮೆಯಾಗಿದೆ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಈ ಸಂದರ್ಭ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಶಕ್ತಿ ಕೇಂದ್ರದ ಪ್ರಮುಖ್ ವಾಸುದೇವ್, ಜಿಲ್ಲಾ ಓಬಿಸಿ ಉಪಾಧ್ಯಕ್ಷ ಬಿ.ಕೆ. ಮೋಹನ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೌತಮ್, ಯುವ ಮೋರ್ಚಾ ಮಾಜಿ ಅಧ್ಯಕ್ಷ ಧನು ಕಾವೇರಪ್ಪ, ಓಬಿಸಿ ಅಧ್ಯಕ್ಷ ಸಿ.ಸಿ. ಸುನಿಲ್, ಶಿವು ಹಾಗೂ ಶಾಲೆಯ ಅಧ್ಯಾಪಕ ವೃಂದದವರು ಇದ್ದರು.