ಸುಂಟಿಕೊಪ್ಪ, ಸೆ. ೨೫: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಅನುದಾನ ಕೋರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಹಾಗೂ ಸದಸ್ಯರ ನಿಯೋಗ ಜಿ.ಪಂ. ಸಿಇಓ ವರ್ಣಿತ್ ನೇಗಿ ಅವರಿಗೆ ಮನವಿ ಸಲ್ಲಿಸಿತು.

ಸುಂಟಿಕೊಪ್ಪ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆಯು ಹೆಚ್ಚಾಗುತ್ತಿದ್ದು, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭ ವಾರ್ಡ್ಗಳಿವೆ. ಪ್ರತಿ ವಾರ್ಡ್ಗಳಿಂದ ನಿತ್ಯ ಕಸ ವಿಲೇವಾರಿಗೊಳಿಸುವ ವಾಹನವು ತುಂಬಾ ಹಳೆಯದಾಗಿದ್ದು ಆಗಿಂದಾಗೆ ದುಸ್ಥಿತಿ ತಲುಪುತ್ತಿದೆ. ಇದರಿಂದ ಪ್ರತಿನಿತ್ಯ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ವಿಲೇವಾರಿಗೊಳಿಸಲು ಕಷ್ಟ ಸಾಧ್ಯವಾಗುತ್ತಿದೆ. ಗ್ರಾಮ ಪಂಚಾಯಿತಿ ಯಿಂದ ಕಸವಿಲೇವಾರಿಗೊಳಿಸಲು ಬದಲಿ ವಾಹನಗಳನ್ನು ಖರೀದಿಸಲು ಅನುದಾನ ಒದಗಿಸಿಕೊಡುವಂತೆ ಕೊಡಗು ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಅವರಲ್ಲಿ ಮನವಿ ಮಾಡಲಾಯಿತು.

ಆರೋಗ್ಯಾಧಿಕಾರಿಗೆ ಮನವಿ

ಪಟ್ಟಣದಲ್ಲಿ ಕೂಲಿ ಕಾರ್ಮಿಕರು, ಮಧÀ್ಯಮ ವರ್ಗದ ಜನರೇ ಅಧಿಕವಾಗಿ ನೆಲೆಸಿದ್ದಾರೆ. ಸುಂಟಿಕೊಪ್ಪ ಪಟ್ಟಣದ ನಡುವೆ ರಾಷ್ಟಿçÃಯ ಹೆದ್ದಾರಿಯು ಹಾದು ಹೋಗಿದೆ. ಹಲವು ಪ್ರವಾಸಿ ಕೇಂದ್ರಗಳಿಗೆ ಸಂಪರ್ಕಿತ ರಸ್ತೆಯಾಗಿದೆ. ನಿತ್ಯ ನೂರಾರು ಪ್ರವಾಸಿಗರ ವಾಹನಗಳು ಸೇರಿದಂತೆ ಭಾರೀ ವಾಹನಗಳು ಈ ಹೆದ್ದಾರಿಯ ಮೂಲಕವೇ ಸಂಚರಿಸುತ್ತವೆ. ಈ ಹೆದ್ದಾರಿಯು ಹಲವು ತಿರುವುಗಳಿಂದ ಕೂಡಿದ್ದು ಆಗ್ಗಿಂದಾಗೆ ವಾಹನಗಳ ಅಪಘಾತಗಳು ಸಂಭವಿಸುತ್ತಿರುತ್ತದೆ. ಈ ಸಂದರ್ಭ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಷ್ಟ ಸಾಧ್ಯ. ನಿತ್ಯ ನೂರಾರು ಹೊರ ರೋಗಿಗಳು ಚಿಕಿತ್ಸೆಗಾಗಿಯೂ ಆಗಮಿಸುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನುರಿತ ವೈದ್ಯಾಧಿಕಾರಿಗಳು ಇಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳನ್ನು ನಿಯೋಜನೆ ಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್. ಸಬಾಸ್ಟೀನ್, ಮಂಜುಳಾ (ರಾಸಥಿ) ಇದ್ದರು.