ಕುಶಾಲನಗರ, ಸೆ.೨೫: ಕುಶಾಲನಗರ ಮಾಜಿ ಸೈನಿಕರ ಸಂಘದ ೨೫ನೇ ವಾರ್ಷಿಕೋತ್ಸವ ಸಮಾರಂಭ ತಾ. ೨೮ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕ್ಯಾಪ್ಟನ್ ಡಿ ಕೆ ಚಿಣ್ಣಪ್ಪ ತಿಳಿಸಿದ್ದಾರೆ.

ಅವರು ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ತಾ. ೨೮ರಂದು ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರ ಗೌಡ ಸಮಾಜದಲ್ಲಿ ಸಂಘದ ಕಟ್ಟಡ ಸ್ಥಳ ದಾನಿಗಳಾದ ನಾಯಕ್ ಕೆದಂಬಾಡಿ ಸಣ್ಣಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.

ಕ್ಯಾಪ್ಟನ್ ಡಿ ಕೆ ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಮೇಜರ್ ಜನರಲ್ ಬಿ.ಎ ಕಾರ್ಯಪ್ಪ, ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರಾದ ಕರ್ನಲ್ ನಾರಾಯಣ ಮೂರ್ತಿ, ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಮೇಜರ್ ಚಿಂಗಪ್ಪ, ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ. ಶ್ರೀಧರ್, ಗ್ರೂಪ್ ಕ್ಯಾಪ್ಟನ್ ಮಡಿಕೇರಿಯ ಕೆ.ಎ. ಕಾರ್ಯಪ್ಪ ಅವರು ಪಾಲ್ಗೊಳ್ಳುವರು..

ಸಂಘದ ಕಟ್ಟಡದ ಸ್ಥಳ ದಾನಿಗಳಿಗೆ ಹಾಗೂ ಸಂಘದ ಸಂಸ್ಥಾಪಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಸಂಘದ ಉಪಾಧ್ಯಕ್ಷರಾದ ಮನು ನಂಜುAಡ, ಸಂಘದ ಕಾರ್ಯದರ್ಶಿ ಎಸ್ ಆರ್ ಮಾದಪ್ಪ, ಖಜಾಂಚಿ ನರೇಶ್ ಕುಮಾರ್ ಇದ್ದರು.