ವೀರಾಜಪೇಟೆ, ಸೆ. ೨೫: ವೀರಾಜಪೇಟೆ ಹೊರವಲಯದ ಕೊಳತ್ತೋಡು ಬೈಗೋಡು ಗ್ರಾಮದ ಲೈನ್ ಮನೆಯಲ್ಲಿ ವಾಸವಿದ್ದ ವಿನು (೨೪), ದಿವ್ಯ (೨೦) ಆತ್ಮಹತ್ಯೆಗೆ ಶರಣಾದ ದಂಪತಿ.

ಕೊಳ್ತೋಡು ಗ್ರಾಮದ ಬೋಪಣ್ಣ ಅವರ ಲೈನ್ ಮನೆಯಲ್ಲಿ ವಾಸವಾಗಿದ್ದ ವಿನು ಹಾಗೂ ಪತ್ನಿ ದಿವ್ಯ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಒಂದು ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಆದರೆ ಇವರಿಬ್ಬರಿಗೆ ಮಕ್ಕಳಾಗಿರಲಿಲ್ಲ. ಈ ಹಿನ್ನೆಲೆ ಗಂಡ ಹೆಂಡತಿಯರ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಇದರಿಂದ ಬೇಸತ್ತ ಇವರು ಕುಡಿತದ ಚಟಕ್ಕೆ ದಾಸರಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆ ಮಾಡುವುದಕ್ಕೆ ಮುನ್ನ ಇವರಿಬ್ಬರೂ ಪೆಗ್ಗರಿಕಾಡುವಿನಲ್ಲಿ ಗಣೇಶ ವಿಸರ್ಜನೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಂದ ಬಂದ ಬಳಿಕ ವೇಲ್‌ನಿಂದ ಅಡುಗೆ ಮನೆ ಕೊಠಡಿಯಲ್ಲಿ ೫ ಅಡಿ ಅಂತರದಲ್ಲಿ ಕೌಕೋಲಿಗೆ ವೇಲ್‌ನಿಂದ ನೇಣುಬಿಗಿದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾಗದ ಹಿನ್ನೆಲೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿ ಮೃತ ವಿನು ಅವರ ತಂದೆ ಮಲ್ಲ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬAಧ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.