ಮಡಿಕೇರಿ, ಸೆ. ೨೬ : ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಮಡಿಕೇರಿ ರಾಣಿಪೇಟೆಯಲ್ಲಿನ ನೂತನ ಯೋಜನಾ ಕಚೇರಿ ಉದ್ಘಾಟನಾ ಕಾರ್ಯಕ್ರಮ ತಾ. ೨೮ ರಂದು ನಡೆಯಲಿದೆ.

ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್ ಮಂಜುನಾಥ್ ಕಚೇರಿ ಉದ್ಘಾಟಿಸಲಿದ್ದಾರೆ. ಶಾಸಕ ಮಂಥರ್ ಗೌಡ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮಡಿಕೇರಿ ಐ.ಡಿ.ಬಿ.ಐ ಬ್ಯಾಂಕ್ ವ್ಯವಸ್ಥಾಪಕ ಮಿಥುನ್ ಕೆ, ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೆಗೌಡ, ಮಡಿಕೇರಿ ಎಸ್.ಬಿ.ಐ ಪ್ರಾದೇಶಿಕ ವ್ಯವಸ್ಥಾಪಕ ಶ್ರೀಜಿತ್ ವಿ.ಕೆ, ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಹಾಗೂ ಯೋಜನ ಕಚೇರಿ ಮಾಲೀಕ ಗಜಾನನ ಕೆ.ಎನ್ ಭಾಗವಹಿಸಲಿದ್ದಾರೆ.