ಸೋಮವಾರಪೇಟೆ, ಅ. ೧೦: ಪಟ್ಟಣದ ಮಹದೇಶ್ವರ ಬಡಾವಣೆಯ ಸಿದ್ದಿವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿಗಳ ಬಳಗದಿಂದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ದ್ವಿತೀಯ ಪಿಯುಸಿಯಲ್ಲಿ ಶೇ. ೯೭ ಅಂಕ ಪಡೆದ ಮಹದೇಶ್ವರ ಬಡಾವಣೆಯ ಕಿಶನ್ ಚಂದ್ರಶೇಖರ್ ಹಾಗೂ ಹಾಕಿ ಕ್ರೀಡೆಯಲ್ಲಿ ಸಾಧನೆ ತೋರುತ್ತಿರುವ ದೃವ ಶ್ಯಾಂ ಪ್ರಸಾದ್ ಅವರುಗಳನ್ನು ಬಳಗದ ವತಿಯಿಂದ ಸನ್ಮಾನಿಸಲಾಯಿತು. ಉತ್ಸವದ ಅಂಗವಾಗಿ ಸಂಗೀತ ರಸ ಮಂಜರಿ ನಡೆಯಿತು. ಈ ಸಂದರ್ಭ ರಂಗೋಲಿ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಅಪ್ಪು ಅಭಿಮಾನಿ ಬಳಗದ ಅಧ್ಯಕ್ಷ ರವಿಕುಮಾರ್ ಅಬ್ಬೂರುಕಟ್ಟೆ, ಉಪಾಧ್ಯಕ್ಷ ರಮೇಶ್, ಕಾರ್ಯದರ್ಶಿ ಎಂ.ಆರ್. ಚೇತನ್, ಪದಾಧಿಕಾರಿಗಳಾದ ರವಿ, ರಮೇಶ್, ಸಚಿನ್, ವೇಣು, ಪ್ರಶಾಂತ್, ಸಿದ್ದಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ನಾಗರಾಜ್, ಗೌರವಾಧ್ಯಕ್ಷ ಆರ್. ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.