ಮಡಿಕೇರಿ, ಅ. ೧೦: ಕಳವು ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾ. ೨೪.೬.೨೦೨೩ ರಂದು ಕೋಣಮಾರಿಯಮ್ಮ ದೇವಸ್ಥಾನ ಬಳಿಯ ನಿವಾಸಿ ಸತೀಶ್‌ಕುಮಾರ್ ಎಂಬವರ ಮನೆಯಲ್ಲಿ ನಗದು ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಕುಶಾಲನಗರ ನಿವಾಸಿಯಾದ ಯತೀಶ್ ಎ.ಎಂ. (೧೯) ಎಂಬಾತನನ್ನು ಬಂಧಿಸಿರುವ ಪೊಲೀಸರು ೬೦೦ ಗ್ರಾಂ. ಬೆಳ್ಳಿ ಹಾಗೂ ೪೦,೦೦೦ ರೂ. ನಗದನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಕೆ. ರಾಜೇಶ್, ಠಾಣಾಧಿಕಾರಿ ಹೆಚ್.ವಿ. ಚಂದ್ರಶೇಖರ್ ಹಾಗೂ ಹೆಚ್.ಟಿ. ಗೀತಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.