ನಾಪೋಕ್ಲು, ಅ. ೧೦: ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಕೋವಿಯನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಬಳಸುವುದರ ಮೂಲಕ ಭಾಗವಹಿಸುವುದು ಮುಖ್ಯ ಎಂದು ನಿವೃತ್ತ ಸುಬೇದಾರ್ ಮೇಜರ್ ಬಾಳೆಯಡ ಅಪ್ಪಣ್ಣ (ಅಪ್ಪಾಜಿ) ಹೇಳಿದರು. ಅವರು ನೆಲಜಿ ಅಂಬಲ ಶಾಲಾ ಮೈದಾನ ದಲ್ಲಿ ಅಂಬಲ ಮಹಿಳಾ ಸಮಾಜ ನೆಲಜಿ ಇವರ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ ಮಾತನಾಡಿ ದರು.

ಕೋವಿ ಪೂಜೆ ನೆರವೇರಿಸಿದ ಬಳಿಕ ತೆಂಗಿನಕಾಯಿಗೆ ಗುಂಡು ಒಡೆದು ಉದ್ಘಾಟಿಸಿ, ಸೇನೆಯಲ್ಲಿ ಶೂಟಿಂಗ್ ಸಂದರ್ಭ ಕಠಿಣ ಮುಂಜಾಗ್ರತಾ ಕ್ರಮಗಳನ್ನು ನಾಪೋಕ್ಲು, ಅ. ೧೦: ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಕೋವಿಯನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಬಳಸುವುದರ ಮೂಲಕ ಭಾಗವಹಿಸುವುದು ಮುಖ್ಯ ಎಂದು ನಿವೃತ್ತ ಸುಬೇದಾರ್ ಮೇಜರ್ ಬಾಳೆಯಡ ಅಪ್ಪಣ್ಣ (ಅಪ್ಪಾಜಿ) ಹೇಳಿದರು. ಅವರು ನೆಲಜಿ ಅಂಬಲ ಶಾಲಾ ಮೈದಾನ ದಲ್ಲಿ ಅಂಬಲ ಮಹಿಳಾ ಸಮಾಜ ನೆಲಜಿ ಇವರ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಿ ಮಾತನಾಡಿ ದರು.

ಕೋವಿ ಪೂಜೆ ನೆರವೇರಿಸಿದ ಬಳಿಕ ತೆಂಗಿನಕಾಯಿಗೆ ಗುಂಡು ಒಡೆದು ಉದ್ಘಾಟಿಸಿ, ಸೇನೆಯಲ್ಲಿ ಶೂಟಿಂಗ್ ಸಂದರ್ಭ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಅಪ್ಪುಮಣಿಯಂಡ ಡೇಸಿ ಸೋಮಣ್ಣ ವಹಿಸಿದ್ದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭ ಕಾಫಿ ಬೆಳೆಗಾರ ಎಳ್ತಂಡ ಬೋಪಣ್ಣ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ನಿವೃತ್ತ ನಬಾರ್ಡ್ ಎಜಿಎಂ ಮುಂಡAಡ ಸಿ. ನಾಣಯ್ಯ, ತಾಮರ ಕೊಡಗು ರೆಸಾರ್ಟಿನ ವ್ಯವಸ್ಥಾಪಕ ಕಲ್ಯಾಟಂಡ ಗಿರೀಶ್ ಸುಬ್ಬಯ್ಯ, ಕಾಫಿ ಬೆಳೆಗಾರ ಕೋಟೆರ ಸುರೇಶ್, ಮಾಜಿ ಸೈನಿಕ ಮಣವಟ್ಟಿರ ಸಾಬು ಉತ್ತಪ್ಪ, ಅಂಬಲ ಮಹಿಳಾ ಸಮಾಜದ ಸಲಹಾ ಸಮಿತಿಯ ಅಧ್ಯಕ್ಷ ಮಣವಟ್ಟಿರ ಕಮಲ ಬೆಳ್ಳಿಯಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೂತನ ವಾಗಿ ಆಯ್ಕೆ ಆಗಿರುವ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ, ನಿರ್ದೇಶಕಿ ಝಾನ್ಸಿ ಮಂದಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಇವರುಗಳನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಪ್ರೀತಿ ಸತೀಶ್ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಕಮಲ ಬೆಳ್ಳಿಯಪ್ಪ ಸ್ವಾಗತಿಸಿ, ಡೇಸಿ ಸೋಮಣ್ಣ ನಿರೂಪಿಸಿ, ವಂದಿಸಿ ದರು. ಅನಂತರ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸ್ಪರ್ಧಾಳುಗಳಿಗೆ ಸ್ಪರ್ಧಾ ಕಾರ್ಯಕ್ರಮಗಳು ಜರುಗಿದವು.