ಮಡಿಕೇರಿ, ಅ. ೧೦: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ವಿವಿಧ ಯೋಜನೆ ಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಹಾಯಧನ- ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯ ಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ನಿಗಮದ-ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ. ೩.೫೦ ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು ೨೧ ವರ್ಷ ಮೇಲ್ಪಟ್ಟು ೪೫ ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮,೦೦೦/- ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩, ವಿಕಲಚೇತನರಿಗೆ ಶೇ.೫ ಹಾಗೂ ತೃತೀಯ ಲಿಂಗಿಗಳಿಗೆ ಶೇ.೧ ರಷ್ಟು ಮೀಸಲಾತಿ ಇರಿಸಿದೆ.

ರಾಜ್ಯ ಸರ್ಕಾರದ/ನಿಗಮದ ಯೋಜನೆಗಳ ವಿವರ: ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು: ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ). ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ಕನಿಷ್ಟ ೧ ಎಕರೆ ಜಮೀನು ಹೊಂದಿದ್ದು, ಸಣ್ಣ ಅಥವಾ ಅತೀ ಸಣ್ಣ ರೈತರಾಗಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗ ದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆ ಈ ಯೋಜನೆಯಡಿ ವಾರ್ಷಿಕ ವರಮಾನವು ರೂ. ೮ ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು ತಿತಿತಿ. ಞಚಿushಚಿಟಞಚಿಡಿ.ಛಿom ನಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿ ದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು-ವಿಳಾಸ-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ-ಶ್ರೀಮತಿ-ಕುಮಾರಿ ಮುಂತಾದ ಮಾಹಿತಿಗಳು). ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ಸೈಟ್ hಣಣಠಿs://ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ. ೦೮೦-೨೨೩೭೪೮೪೮, ೭೮೯೯೮೯೯೦೩೯ ಸಂಪರ್ಕಿಸಿ ಪಡೆಯಬಹುದು. ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಲ್ಲಿ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ದೂರವಾಣಿ ೦೮೨೭೨-೨೨೧೬೫೬ ಮೂಲಕ ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾAಶದ ಮೂಲಕ ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.