ಮಡಿಕೇರಿ, ಅ. ೧೦: ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಕೊಡವ ಸಮಗ್ರ ಕುಲಶಾಸ್ತç ಅಧ್ಯಯನ, ಕೊಡವ “ಸಂಸ್ಕಾರ ಗನ್” ಸಂವಿಧಾನದ ೨೫ ಮತ್ತು ೨೬ನೇ ವಿಧಿಗಳಡಿಯಲ್ಲಿ ಕೊಡವರ "ಧಾರ್ಮಿಕ ಸಂಸ್ಕಾರ"ವೆAದು ರಕ್ಷಿಸುವುದು ಸೇರಿದಂತೆ ೯ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ.

ತೊಡನಾಡ್ (ಕುಮಟೂರ್-ಶ್ರೀಮಂಗಲ) ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು) ಅಜ್ಜಮಾಡ ನಾಡ್ ಮಂದ್- ಕುರ್ಚಿಯಲ್ಲಿ ನಡೆದ ಮೂರನೇ ಹಂತದ ಪಾದಯಾತ್ರೆ ಮತ್ತು ಕೊಡವ ಜನಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೀವನದಿ ಕಾವೇರಿಗೆ "ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ ೭ ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ‍್ರೆ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು. ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದರು.

ತಾ.೧೧ ರಂದು ಬೆಳಿಗ್ಗೆ ೧೦ ಗಂಟೆಗೆ ತಾಳೆರಿನಾಡ್ (ಟಿ.ಶೆಟ್ಟಿಗೇರಿ), ಮಧ್ಯಾಹ್ನ ೧.೩೦ ಗಂಟೆಗೆ ಅಂಜಿಗೇರಿನಾಡ್ (ಹುದಿಕೇರಿ-ಬೇಗೂರು) ಮತ್ತು ಸಂಜೆ ೪.೩೦ ಗಂಟೆಗೆ ಪೊನ್ನಂಪೇಟೆ ಪಟ್ಟಣದಲ್ಲಿ ಮೆರವಣಿಗೆ ಹಾಗೂ ಸಭೆ ನಡೆಯಲಿದೆ ಎಂದು ನಾಚಪ್ಪ ತಿಳಿಸಿದರು.

ಬಾಚರಣಿಯಂಡ ಚಿಪ್ಪಣ್ಣ, ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ, ಕೊಟ್ರಂಗಡ ಉಷಾ ಮಾದಪ್ಪ, ಕಲ್ಲಂಗಡ ಬೋಪಯ್ಯ, ಅಜ್ಜಿಕುಟ್ಟೀರ ಲೋಕೇಶ್, ಕೊಟ್ರಂಗಡ ಸನ್ನಿ, ಬೊಟ್ಟಂಗಡ ಸವಿ ಗಿರೀಶ್, ಬಾಚರಣಿಯಂಡ ಪ್ರಮೀಳಾ ಚಿಪ್ಪಣ್ಣ, ಕಲ್ಲಂಗಡ ತುಳಸಿ ಪೊನ್ನಣ್ಣ, ಮಾತ್ರಂಡ ಅನಿತಾ ಮಾದಪ್ಪ, ಮುಕ್ಕಾಟಿರ ದಿವ್ಯ ಸೋಮಣ್ಣ, ಮುಕ್ಕಾಟಿರ ಭವ್ಯ ಸುನಿಲ್, ಚೇಂದAಡ ವಿಲ್ಮ ದೀಪಕ್, ಕೊಟ್ರಂಗಡ ಜಾಜಿ, ತೀತಿರ ಸೂರಜ್, ಮುಕ್ಕಾಟಿರ ದೇವಯ್ಯ, ಅಳ್ಮೇಂಗಡ ಮೋಟಯ್ಯ, ಕಲ್ಲಂಗಡ ಪೂಣಚ್ಚ, ಕಲ್ಲಂಗಡ ಗಣಪತಿ, ಕೊಟ್ರಂಗಡ ಅಪ್ಪಣ್ಣ, ಬಾಚಂಗಡ ಗಣಪತಿ, ಚೇಂದAಡ ದೀಪಕ್ ಮತ್ತಿತರರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.