ಸೋಮವಾರಪೇಟೆ, ಅ. ೧೮: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಪರಿವರ್ತನವಾದ ಸಂಘಟನೆಯ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಇಲ್ಲಿನ ಕೊಡವ ಸಮಾಜದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು ಈ ಬಗ್ಗೆ ಮನವಿ ಸಲ್ಲಿಸಿ, ಮಡಿಕೇರಿಯಲ್ಲಿ ಅಂಬೇಡ್ಕರ್ ಭವನ ಹಾಗೂ ಅಂಬೇಡ್ಕರ್ ಪ್ರತಿಮೆಯನ್ನು. ಸರ್ಕಾರದ ಅನುದಾನದಲ್ಲಿ ಸರಕಾರಿ ಜಾಗದಲ್ಲಿ ಶೀಘ್ರವಾಗಿ ನಿರ್ಮಿಸಲು ಕ್ರಮವಹಿಸಬೇಕೆಂದು ಸಚಿವರ ಗಮನ ಸೆಳೆದರು. ಅಂತೆಯೇ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರಿಗೂ ಮನವಿ ನೀಡಲಾಯಿತು.

ಈ ಸಂದರ್ಭ ಸಂಘಟನೆಯ ಸಂಘಟನಾ ಸಂಚಾಲಕ ಅವಿನಾಶ್, ವಿಜಯಕುಮಾರ್, ಅಲ್ಪಸಂಖ್ಯಾತ ಘಟಕದ ಮುನಾಫ್ ಪಾಷಾ ಹಾಗೂ ಶಾಹಿದ್, ಶನಿವಾರಸಂತೆ ಹೋಬಳಿ ಸಂಚಾಲಕ ರೋಹಿತ್, ಕೊಡ್ಲಿಪೇಟೆ ಸಂಚಾಲಕ ಪವನ್ ಮತ್ತು ಚಿಂತನ್ ಉಪಸ್ಥಿತರಿದ್ದರು.