ಮಡಿಕೇರಿ, ಅ. ೧೯: ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಯುವ ದಸರಾ ಸಮಿತಿ ವತಿಯಿಂದ ಗ್ರೀನ್ ಸಿಟಿ ಫೋರಂ ಸಹಯೋಗದಲ್ಲಿ ‘ದಸರಾ ಸೈಕ್ಲಥಾನ್ ೨೦೨೩’ ಹಮ್ಮಿಕೊಳ್ಳಲಾಗಿದೆ.

ತಾ. ೨೧ ರಂದು ಬೆಳಿಗ್ಗೆ ೮ ಗಂಟೆಗೆ ಸೈಕ್ಲಥಾನ್ ಆರಂಭವಾಗಲಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಬಳಿಕ ಜನರಲ್ ತಿಮ್ಮಯ್ಯ ಸರ್ಕಲ್, ಹಳೆ ಖಾಸಗಿ ಬಸ್ ನಿಲ್ದಾಣ, ಇಂದಿರಾ ಗಾಂಧಿ ವೃತ್ತ, ಎಲ್‌ಐಸಿ ಮಾರ್ಗವಾಗಿ ಸಾಗಿ ಗಾಂಧಿ ಮೈದಾನದಲ್ಲಿ ಕೊನೆಗೊಳ್ಳಲಿದೆ ಎಂದು ಯುವ ದಸರಾ ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ ಹಾಗೂ ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಚೈಯ್ಯಂಡ ಸತ್ಯ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಮುಕ್ತ ಕೊಡಗು, ಡ್ರಗ್ಸ್ ಮುಕ್ತ ಕೊಡಗು ಎಂಬ ಧ್ಯೇಯದೊಂದಿಗೆ ಸೈಕ್ಲಥಾನ್ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕವನ್ ಕೊತ್ತೋಳಿ, ೯೭೪೧೨೯೨೮೨೫ ಸಂಖ್ಯೆಯನ್ನು ಸಂಪರ್ಕಿಸಬಹುದು.