ಮಡಿಕೇರಿ, ನ. ೩ : ವಾಡಿಕೆಗಿಂತ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದ ೨೧೬ ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು ಕೊಡಗು ಜಿಲ್ಲೆ ಕೂಡ ಈ ಪಟ್ಟಿಯಲ್ಲಿ ಸೇರಿದೆ. ಇದೀಗ ೨೦೨೩-೨೪ನೇ ಅಯ ವ್ಯಯದಲ್ಲಿ ಎಸ್‌ಡಿಆರ್‌ಎಫ್‌ರಡಿ ಬರಪರಹಾರಕ್ಕಾಗಿ ಅನುದಾನ ಒದಗಿಸಲಾಗಿದೆ. ಒಟ್ಟು ೩೨,೪೦೦ ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕೊಡಗು ಜಿಲ್ಲೆಗೆ ರೂ. ೭೫೦ ಲಕ್ಷ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಸರಕಾರದ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಘೋಷಣೆ ಮಾಡಿದ್ದಾರೆ.