ಕಣಿವೆ, ನ. ೩ : ಬೈಕ್ ಚಾಲಿಸುತ್ತಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ.

೨೪ ರ ಪ್ರಾಯದ ಪ್ರಶಾಂತ್ ಮೃತ ದುರ್ದೈವಿ.

ಕೂಡ್ಲೂರು ಗ್ರಾಮದ ಪ್ರಹ್ಲಾದ್ ಎಂಬವರ ಪುತ್ರನಾದ ಪ್ರಶಾಂತ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದು ರಜೆಯ ಮೇಲೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಈತ ಕುಶಾಲನಗರದಿಂದ ಕೂಡಿಗೆ ಮಾರ್ಗವಾಗಿ ತೆರಳುತ್ತಿದ್ದಾಗ ವೇಗವಾಗಿ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಕೈಗಾರಿಕಾ ಬಡಾವಣೆಯಲ್ಲಿನ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆಯನ್ನು

ನೋಡಿ ಜೀವ ಉಳಿಸಬೇಕೆಂಬ ಕಾರಣದಿಂದ ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ

ಚಿಕಿತ್ಸೆಗೆ ಮಡಿಕೇರಿಗೆ ಸಂಚಾರಿ ಪೊಲೀಸ್ ವಾಹನದ ಬೆಂಗಾವಲಿನಲ್ಲಿ ಕರೆದೊಯ್ಯಲಾಯಿತು.

ಬೈಕ್ ಅವಘಡ - ಯುವಕ ಸಾವು

ಕಣಿವೆ, ನ. ೩ : ಬೈಕ್ ಚಾಲಿಸುತ್ತಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ.

೨೪ ರ ಪ್ರಾಯದ ಪ್ರಶಾಂತ್ ಮೃತ ದುರ್ದೈವಿ.

ಕೂಡ್ಲೂರು ಗ್ರಾಮದ ಪ್ರಹ್ಲಾದ್ ಎಂಬವರ ಪುತ್ರನಾದ ಪ್ರಶಾಂತ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದು ರಜೆಯ ಮೇಲೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಈತ ಕುಶಾಲನಗರದಿಂದ ಕೂಡಿಗೆ ಮಾರ್ಗವಾಗಿ ತೆರಳುತ್ತಿದ್ದಾಗ ವೇಗವಾಗಿ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಕೈಗಾರಿಕಾ ಬಡಾವಣೆಯಲ್ಲಿನ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದೇ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆಯನ್ನು

ನೋಡಿ ಜೀವ ಉಳಿಸಬೇಕೆಂಬ ಕಾರಣದಿಂದ ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ

ಚಿಕಿತ್ಸೆಗೆ ಮಡಿಕೇರಿಗೆ ಸಂಚಾರಿ ಪೊಲೀಸ್ ವಾಹನದ ಬೆಂಗಾವಲಿನಲ್ಲಿ ಕರೆದೊಯ್ಯಲಾಯಿತು.