ಮಡಿಕೇರಿ, ನ. ೧೨: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ರಾಷ್ಟçಕವಿ ಕುವೆಂಪು ಅವರ ಪುಣ್ಯಸ್ಮರಣೆ ಅಂಗವಾಗಿ ಮಡಿಕೇರಿ ನಗರದಲ್ಲಿರುವ ವಿಶ್ವ ಮಾನವ ಉದ್ಯಾನವನದಲ್ಲಿರುವ ರಾಷ್ಟçಕವಿಗಳ ಪುತ್ಥಳಿಗೆ ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರುಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭ ಹಿತರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷ ಖಲೀಲ್ ಭಾಷಾ, ಅಧ್ಯಕ್ಷ ರವಿಗೌಡ, ವಿಷ್ಣುಸೇನಾ ಜಿಲ್ಲಾಧ್ಯಕ್ಷ ರಫೀಕ್ ದಾದಾ, ಜನರಲ್ ಕೆ.ಎಂ. ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ವೀರಭದ್ರ ಮುನೀಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ. ಮಂಜುನಾಥ್, ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರುಗಳಾದ ಪುನೀತ್, ಪ್ರದೀಪ್, ಕಿರಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.