ಸೋಮವಾರಪೇಟೆ, ನ. ೧೩: ಪಟ್ಟಣದ ದೇವಸ್ಥಾನ ರಸ್ತೆಯಲ್ಲಿರುವ ಕಟ್ಟಡದಲ್ಲಿ ನೂತನವಾಗಿ ತೆರೆಯಲಾಗಿರುವ ಕರ್ನಾಟಕ ಒನ್ ಕೇಂದ್ರಕ್ಕೆ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸಹಕಾರಿಯಾಗಲಿದೆ ಎಂದರು.

ತಾಲೂಕು ತಹಶೀಲ್ದಾರ್ ನರಗುಂದ ಮಾತನಾಡಿ, ಕರ್ನಾಟಕ ಒನ್ ಸೇವೆಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಜನರು ಸದುಪಯೋಗಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರುಗಳಾದ ಬಿ.ಸಿ. ವೆಂಕಟೇಶ್, ಶೀಲಾ ಡಿಸೋಜ, ಮೋಹಿನಿ, ಬಿ.ಆರ್.ಮಹೇಶ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಾಚಪ್ಪ, ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ಕರ್ನಾಟಕ ಒನ್ ವ್ಯವಸ್ಥಾಪಕ ಎಸ್.ಚಂದ್ರು, ಪ್ರಮುಖರುಗಳಾದ ಸೋಮೇಶ್, ಶರತ್, ಲೋಹಿತಾಶ್ವ, ದಂತ ವೈದ್ಯ ಸೂರ್ಯ ವೆಂಕಟೇಶ್, ಅಭಿಯಂತರ ಎಸ್.ಎಂ.ಧನುಷ್ ಹಾಗೂ ಸೇವಾ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.