ಗೋಣಿಕೊಪ್ಪಲು, ನ. ೨೫: ವಿಶೇಷಚೇತನ ಮಕ್ಕಳು ದಿನಪೂರ್ತಿ ವಿವಿಧ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಸೂಸಿದರು. ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿಶೇಷಚೇತನರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ನಾವು ಕೂಡ ಯಾರಿಗೂ ಕಡಿಮೆ ಇಲ್ಲ ಎಂಬAತೆ ತಮ್ಮ ಪ್ರದರ್ಶನವನ್ನು ತೋರಿದರು.

ಗೋಣಿಕೊಪ್ಪಲುವಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಚೆಷೈರ್ ಹೋಮ್ಸ್ ಇಂಡಿಯಾ ಕೂರ್ಗ್ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನರಿಗೆ ೧೫ಕ್ಕೂ ಹೆಚ್ಚಿನ ಕ್ರೀಡೆಗಳು ನಡೆದವು. ಮುಂಜಾನೆಯಿAದ ಸಂಜೆಯವರೆಗೂ ನಡೆದ ವಿವಿಧ ಕ್ರೀಡೆಯಲ್ಲಿ ವಿಶೇಷ ಚೇತನರು ಆಸಕ್ತಿ ವಹಿಸಿ ಕ್ರೀಡೆಯಲ್ಲಿ ಪಾಲ್ಗೊಂಡರು.

ವಿವಿಧ ರೀತಿಯ ಆಟೋಟ ಗಳಲ್ಲಿ ಭಾಗವಹಿಸಿ ವಿಶೇಷಚೇತನರು ಸಂಭ್ರಮಿಸಿದರು. ರಿಂಗ್ ಏಸೆತ, ಬಕೆಟ್‌ಗೆ ಬಾಲ್ ಹಾಕುವುದು, ಕಪ್ ಪಿರಮಿಡ್ ಲೆಮನ್ ಐಂಡ್ ಸ್ಪೂನ್ ಸೇರಿದಂತೆ ವೈವಿಧ್ಯಮಯ ಆಟೋಟಗಳನ್ನು ಆಡಿದರು.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯಬಾಲು ಅಧ್ಯಕ್ಷತೆಯಲ್ಲಿ ನಡೆದ ಕ್ರೀಡೋತ್ಸವದಲ್ಲಿ ಲಯನ್ಸ್ ಸಂಸ್ಥೆಯ ಗವರ್ನರ್ ಲ. ಮಲ್ವಿನ್ ಡಿಸೋಜ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೋತ್ಸವಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡಿರುವುದು ಶ್ಲಾಘನೀಯ, ಎಲ್ಲರು ಒಟ್ಟಾಗಿ ಸೇರಿ ವಿಶೇಷಚೇತನರ ಮಕ್ಕಳೊಂದಿಗೆ ಬೆರೆಯುತ್ತಿರುವುದು ಆಶಾದಾಯಕ ಬೆಳವಣಿಗೆ. ಸಮಾಜದಲ್ಲಿ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಕ್ರೀಡಾಕೂಟವು ನಡೆಸುತ್ತಿರುವುದರಿಂದ ಮಕ್ಕಳಲ್ಲಿನ ಪ್ರತಿಭೆಗಳಿಗೆ ಉತ್ತಮ ವೇದಿಕೆ ನಿರ್ಮಾಣ ಮಾಡಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ವಿಶೇಷ ಚೇತನರ ಕಲ್ಯಾಣಾಧಿಕಾರಿ ವಿಮಲ ಮಾತನಾಡಿ, ಪ್ರತಿ ವರ್ಷವೂ ವಿಶೇಷ ಚೇತನರಿಗೆ ಕ್ರೀಡೋತ್ಸವ ಆಯೋಜಿಸ ಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶ ಲಭ್ಯವಿರದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರತಿ ಮಗುವಿಗೂ ಪಾಲ್ಗೊಳ್ಳುವ ನಿಟ್ಟಿನಲ್ಲಿ ಈ ಕ್ರೀಡೆಯನ್ನು ತಾಲೂಕು ಮಟ್ಟದಲ್ಲಿ ಆಯೋಜಿಸಲಾಗಿದೆ. ಇಲ್ಲಿ ವಿಜೇತರಾದವರನ್ನು ಜಿಲ್ಲಾಮಟ್ಟದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನ್ನಕ್ಕಮನೆ ಸೌಮ್ಯಬಾಲು, ವಿವಿಧ ಸಂಘ ಸಂಸ್ಥೆಗಳು ವಿಶೇಷಚೇತನರ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡು ವಂತಾಗಬೇಕು. ಇಂತಹ ಮಕ್ಕಳಿಗೆ ವೇದಿಕೆಗಳು ಆಗಿಂದ್ದಾಗಿಯೆ ಸಿಗು ವಂತಾಗಬೇಕು. ಇದರಿಂದ ಇವರಲ್ಲಿನ ಪ್ರತಿಭೆಗಳನ್ನು ಹೊರ ಸೂಸಲು ಅವಕಾಶ ನೀಡಿ ದಂತಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಪರಿವೀಕ್ಷಣಾಧಿಕಾರಿ ಗಾಯಿತ್ರಿ, ಚೆಷೈರ್ ಹೋಮ್ಸ್ ಇಂಡಿಯಾ ಕೂರ್ಗ್ನ ಅಧ್ಯಕ್ಷೆ ಗೀತಾ ಚೆಂಗಪ್ಪ, ಉಪಾಧ್ಯಕ್ಷೆ ಸುನೀತ ರಾಮಸ್ವಾಮಿ, ಗೌರವ ಕಾರ್ಯದರ್ಶಿ ಆಶಾ ಸುಬ್ಬಯ್ಯ, ಸ್ವಾಮಿ ವಿವೇಕಾನಂದ ಸಂಸ್ಥೆಯ ಖಜಾಂಜಿ ಡಾ. ಚಂದ್ರ ಶೇಖರ್, ತಾಲೂಕು ವೈದ್ಯಾಧಿಕಾರಿ ಡಾ.ಯತಿರಾಜ್ ಸೇರಿದಂತೆ ಇನ್ನಿತರ ಪ್ರಮುಖರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಸ್ತಿçÃಶಕ್ತಿ ಒಕ್ಕೂಟದ ಅಧ್ಯಕ್ಷೆ ರಜನಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಶ್, ಗೋಣಿಕೊಪ್ಪ ಗ್ರಾ.ಪಂ. ಪಿಡಿಓ ತಿಮ್ಮಯ್ಯ, ಕಾರ್ಯದರ್ಶಿ ರಾಜು, ಗೋಣಿಕೊಪ್ಪ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಲೋಕೇಶ್ ಕಾರ್ಯಪ್ಪ, ಕಾರ್ಯದರ್ಶಿ ಅಪ್ಪಣ್ಣ, ಖಜಾಂಜಿ ಕುಶಾಲಪ್ಪ, ಸೇರಿದಂತೆ ಇನ್ನಿತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಆರ್‌ಡಬ್ಲೂö್ಯ ಶಾಂತಿ, ಚೆಷೈರ್ ಹೋಮ್ಸ್ ಇಂಡಿಯಾ ಕೂರ್ಗ್ನ ವಿಶೇಷ ಶಿಕ್ಷಕಿ ಶಂಸಿದ ಸ್ವಾಗತಿಸಿ, ಮುಖ್ಯ ಶಿಕ್ಷಕ ಶಿವರಾಜ್ ನಿರೂಪಿಸಿ, ಶಿಶು ಕಲ್ಯಾಣ ಇಲಾಖೆಯ ಎಸಿಡಿಪಿಓ ರೀತಾ ವಂದಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಕಾರ್ಯ ಕರ್ತರು ಪೋಷಕರು ಪಾಲ್ಗೊಂಡಿದ್ದರು.

- ಹೆಚ್.ಕೆ. ಜಗದೀಶ್