ಮಡಿಕೇರಿ, ಡಿ. ೫: ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಡಂಗಮರೂರಿನಲ್ಲಿ ನೆಲೆಸಿ, ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ರಾಜ್ಯದ ಅಬ್ದುಲ್ ಮಜೀದ್ (೩೧) ಬಂಧಿತ ಆರೋಪಿ.

ಕಡಂಗಮರೂರು-ಬೊಳ್ಳುಮಾಡು ಜಂಕ್ಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ೩೦೦ ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ಮಾದಕ ವಸ್ತು ತಡೆಗಟ್ಟುವ ನಿಟ್ಟಿನಲ್ಲಿ ರಚನೆಯಾಗಿರುವ ವೀರಾಜಪೇಟೆ ಡಿವೈಎಸ್‌ಪಿ ಆರ್. ಮೋಹನ್ ಕುಮಾರ್, ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಉಪನಿರೀಕ್ಷಕರುಗಳಾದ ಸಿ.ಸಿ. ಮಂಜುನಾಥ್, ಬಿ.ಎಸ್. ವಾಣಿಶ್ರೀ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.