ಕೂಡಿಗೆ, ಡಿ. ೯: ತನ್ನದೇ ಆದ ಸಾಂಸ್ಕೃತಿಕ ಇತಿಹಾಸವನ್ನು ಹೊಂದಿರುವ ಅತ್ಯಂತ ಶ್ರೀಮಂತ ಭಾಷೆ ಕನ್ನಡ. ಇಂತಹ ಭಾಷೆಯ ಉಳಿವು, ಬೆಳವಣಿಗೆ ಮತ್ತು ಪ್ರಸರಣ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು. ಮಾತೃಭಾಷೆ ಯಾಗಿರುವ ಕನ್ನಡ ಭಾಷೆಯ ಅಸ್ಮಿತೆ ಮತ್ತು ಶ್ರೀಮಂತಿಕೆಯನ್ನು ಕಾಪಾ ಡುವ ಹೊಣೆಗಾರಿಕೆ ಕನ್ನಡಿಗರದ್ದಾ ಗಿದೆ ಎಂದು ಕೊಡಗು ವಿಶ್ವವಿದ್ಯಾಲ ಯದ ಕುಲಪತಿಗಳಾದ ಪ್ರೊ. ಅಶೋಕ ಸಂ. ಆಲೂರ ಅಭಿಪ್ರಾಯಿಸಿದರು.

ಶಾಸ್ತಿçÃಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನ ಮೈಸೂರು, ಉನ್ನತ ಶಿಕ್ಷಣ ಇಲಾಖೆ, ಕೊಡಗು ಜ್ಞಾನ ಕಾವೇರಿ ಕ್ಯಾಂಪಸ್ ಸಹಯೋಗದಲ್ಲಿ ನಡೆದ ಭಾರತೀಯ ಭಾಷಾ ಉತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ‘ಭಾರತೀಯ ಭಾಷೆಗಳು-ಸಾಹಿತ್ಯ: ವೈವಿಧ್ಯತೆ ಹಾಗೂ ಐಕ್ಯತೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಹಳ ಹೆಮ್ಮೆಯಿಂದ ಕನ್ನಡಿಗರು ಎಂದು ಹೇಳಿಕೊಳ್ಳುವ ನಾವುಗಳು ಕೇವಲ ಕನ್ನಡ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗದೆ, ಪ್ರತಿನಿತ್ಯ ಕನ್ನಡ ಭಾಷೆಯನ್ನು ನಿರರ್ಗಳವಾಗಿ ಮಾತ ನಾಡುವುದನ್ನು ರೂಢಿಸಿಕೊಳ್ಳಬೇಕು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನಮ್ಮ ಕನ್ನಡ ಭಾಷೆಯ ಜೊತೆ ಜೊತೆಗೆ ದೇಶದ ಮತ್ತು ಜಗತ್ತಿನ ಇತರೆ ಭಾಷೆಗಳನ್ನು ಕೂಡ ಕಲಿತುಕೊಂಡು ಹಾಗೂ ಐಕ್ಯತೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಹಳ ಹೆಮ್ಮೆಯಿಂದ ಕನ್ನಡಿಗರು ಎಂದು ಹೇಳಿಕೊಳ್ಳುವ ನಾವುಗಳು ಕೇವಲ ಕನ್ನಡ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗದೆ, ಪ್ರತಿನಿತ್ಯ ಕನ್ನಡ ಭಾಷೆಯನ್ನು ನಿರರ್ಗಳವಾಗಿ ಮಾತ ನಾಡುವುದನ್ನು ರೂಢಿಸಿಕೊಳ್ಳಬೇಕು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನಮ್ಮ ಕನ್ನಡ ಭಾಷೆಯ ಜೊತೆ ಜೊತೆಗೆ ದೇಶದ ಮತ್ತು ಜಗತ್ತಿನ ಇತರೆ ಭಾಷೆಗಳನ್ನು ಕೂಡ ಕಲಿತುಕೊಂಡು ಸಂಸ್ಕೃತ ಭಾಷೆಯು ಭಾರತದ ಎಲ್ಲಾ ಭಾಷೆಗಳ ಮೇಲೆ ಪ್ರಭಾವ ಬೀರಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಅವರು, ನಮ್ಮ ದೇಶವು ಹಲವು ಭಾಷೆ ಮತ್ತು ಉಪಭಾಷೆಗಳನ್ನು ಬಳಸುವ ಜನಸಮೂಹವನ್ನು ಹೊಂದಿದೆ. ಒಂದು ಭಾಷೆ ಮನುಷ್ಯನ ಸಂಬAಧ ಬೆಸೆಯವಂತಹ ಕೆಲಸ ಮಾಡುತ್ತದೆ. ಭಾರತೀಯ ಭಾಷೆ ಮತ್ತು ಸಾಹಿತ್ಯವು ಬಹು ವಿಶಿಷ್ಟತೆ ಯಿಂದ ಕೂಡಿದ್ದು ಐಕ್ಯತೆಯನ್ನು ಸಾರುತ್ತಾ ಬಂದಿದೆೆ. ಅದರಲ್ಲೂ ಕನ್ನಡ ಭಾಷೆಯು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿರುವ ಅತ್ಯಂತ ಶ್ರೇಷ್ಠ ಭಾಷೆಯಾಗಿದ್ದು ಸಾಹಿತ್ಯ ಲೋಕಕ್ಕೆ ಹಲವಾರು ಮೇರು ಕವಿಗಳನ್ನು ಮತ್ತು ಲೇಖಕರನ್ನು ಪರಿಚಯಿಸಿಕೊಟ್ಟಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಸ್ತಿçÃಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಅಸೋಸಿಯೇಟ್ ಫೆಲೋ ಡಾ. ರಕ್ಷಿತ್, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಅಮೃತ್‌ರಾಜ್ ನಿರೂಪಿಸಿ, ಉಪನ್ಯಾಸಕ ಡಾ. ಜಮೀರ್ ಅಹಮದ್ ಸ್ವಾಗತಿಸಿ, ಡಾ. ಬಿ.ಆರ್. ರಮೇಶ್ ವಂದಿಸಿದರು.