ನಾಪೋಕ್ಲು, ಡಿ. ೧೦: ಇಲ್ಲಿಗೆ ಸಮೀಪದ ಚೆರಿಯಪರಂಬು- ಕಲ್ಲು ಮೊಟ್ಟೆ ರಸ್ತೆ ಕಾಮಗಾರಿ ಆರಂಭಗೊAಡಿದ್ದು ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಅಂಬೇಡ್ಕರ್ ಯುವಕ ಸಂಘದ ಸತತ ಪ್ರಯತ್ನದಿಂದ ಶಾಸಕ ಪೊನ್ನಣ್ಣ ಅವರ ಮುತುವರ್ಜಿಯಿಂದ ೧೦ ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆರಂಭಗೊAಡಿದೆ. ಆದರೆ ನಿರ್ಮಾಣ ವಾಗುತ್ತಿರುವ ರಸ್ತೆ ಉತ್ತಮ ಗುಣಮಟ್ಟದಿಂದ ಕೂಡಿಲ್ಲ. ರಸ್ತೆ ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟು ಕಳಪೆ ಕಾಮಗಾರಿಯಾಗಿದೆ ಎಂದು ಸ್ಥಳೀಯರು ಆರೋಪಿ ಸಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಚೆರಿಯಪರಂಬುವಿನ ಬಶೀರ್ ಆಲಿ ಮಾತನಾಡಿ ರಸ್ತೆ ಕಾಮಗಾರಿ ಕೈಗೊಳ್ಳುತ್ತಿದ್ದಂತೆ ಬಿರುಕು ಬಿಟ್ಟು ಕಳಪೆ ಕಾಮಗಾರಿ ಆಗುತ್ತಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕಾಮಗಾರಿ ನಡೆಯುವ ಸಂದರ್ಭ ಕಾಮಗಾರಿಗಳ ವಿವರ ಗಳ ಮಾಹಿತಿಯನ್ನು ನೀಡಬೇಕಾಗಿದೆ. ಈ ಬಗ್ಗೆ ಇಂಜಿನಿಯರ್ ಅಶೋಕ ಹಾಗೂ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ (ಪಿಡಿಓ) ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕರಿಗೆ ಕಳಂಕ ತರುವ ಕೆಲಸ ಮಾಡಬೇಡಿ. ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ ಕೊಡಿ. ಮಾತ್ರವಲ್ಲದೆ ಕಾಮಗಾರಿಯನ್ನು ಸಂಬAಧಿಸಿದವರು ಕೂಡಲೇ ಕಾಮಗಾರಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸ್ಥಳೀಯ ನಿವಾಸಿ ಮೊಹಮ್ಮದ್ ರಫಿ ಮಾತನಾಡಿ ರಸ್ತೆ ಕಾಮಗಾರಿಗೆ ಮರಳು ಹಾಕಿ ಕಾಂಕ್ರೀಟ್ ನಿರ್ಮಾಣ ಮಾಡಿದರೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗುತ್ತದೆ. ಈಗ ಕಲ್ಲಿನ ಪುಡಿ ಹಾಕುತ್ತಿದ್ದಾರೆ. ಮಳೆ ಬಂದಾಗ ರಸ್ತೆ ದುಸ್ಥಿತಿಗೆ ಬರುತ್ತದೆ. ಎಂ ಸ್ಯಾಂಡ್ ಹಾಗೂ ಮರಳು ಬಳಕೆ ಮಾಡಿ ಗುಣ ಮಟ್ಟದ ರಸ್ತೆ ನಿರ್ಮಿಸಿ ಕೊಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಗ್ರಾಮಸ್ಥರಾದ ಚೆರಿಯಪರಂಬುವಿನ ಪುಲಿಯಂಡ ಮೊಯಿದು, ಮೊಹಮ್ಮದ್ ರಫೀಕ್, ರಶೀದ್, ಅಬ್ದುಲ್ ರೆಹಮಾನ್, ಅಬ್ಬಾಸ್ ಮತ್ತಿತರರು ಇದ್ದರು.