ಪೊನ್ನಂಪೇಟೆ, ಡಿ.೧೦: ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವನ್ನು ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಅಧ್ಯಕ್ಷತೆ ಯಲ್ಲಿ ಬಿಟ್ಟಂಗಾಲದಲ್ಲಿ ನಡೆದ ಜಿಲ್ಲೆಯ ವಿವಿಧ ೬ ಬ್ಲಾಕ್ಗಳ ನೂತನ ಅಧ್ಯಕ್ಷರ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೇರೆ ಬೇರೆ ಕಾರಣಗಳಿಗಾಗಿ ಪಕ್ಷದ ಸಂಘಟನಾ ಕಾರ್ಯಗಳಿಂದ ದೂರವಿರುವ ಅಲ್ಪಸಂಖ್ಯಾತ ಮುಖಂಡರನ್ನು ಮತ್ತೆ ಒಂದೆಡೆ ಸೇರಿಸಿ ಅವರನ್ನು ಪಕ್ಷದ ಕಾರ್ಯ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳು ವಂತೆ ಮಾಡಬೇಕು. ಇದರಿಂದ ಪಕ್ಷದ ಬೆಳವಣಿಗೆಗೆ ಸಹಕಾರಿಯಾಗು ತ್ತದೆ. ಅಲ್ಲದೆ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನೋಪಯೋಗಿ ಯೋಜನೆಗಳ ಕುರಿತು ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ವಿವಿಧ ಬ್ಲಾಕ್ ಸಮಿತಿ ಅಧ್ಯಕ್ಷರು, ಈ ಮೂಲಕ ಮುಂಬರುವ ಲೋಕ ಸಭೆ ಸೇರಿದಂತೆ ಜಿ.ಪಂ. ಮತ್ತು ತಾ. ಪಂ. ಚುನಾವಣೆಗೆ ಅಲ್ಪಸಂಖ್ಯಾತರ ಘಟಕವನ್ನು ಮತ್ತಷ್ಟು ಸಜ್ಜುಗೊಳಿ ಸಲು ಸಲಹೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಳೆದ ಹಲವು ದಶಕ ಗಳಿಂದ ಸಂಪೂರ್ಣವಾಗಿ ಬೆಂಬಲಿ ಸುತ್ತಾ ಬಂದಿರುವ ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಮತ್ತು ಪ್ರಮುಖ ರಿಗೆ ಸೂಕ್ತ ರಾಜಕೀಯ ಸ್ಥಾನಮಾನ ಗಳು ಇದುವರೆಗೂ ದೊರೆತಿಲ್ಲ. ಸಾಮಾಜಿಕ ನ್ಯಾಯದ ಆಧಾರದ ಲ್ಲಾದರೂ ಪಕ್ಷದ ಪ್ರಮುಖರಿಗೆ ಮತ್ತು ಕಾರ್ಯಕರ್ತರಿಗೆ ದಕ್ಕಬೇಕಾದ ಸ್ಥಾನಮಾನಗಳನ್ನು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತಲ್ಲದೆ, ರಾಜ್ಯ ವರಿಷ್ಠರ ಮುಂದೆ ಸೂಕ್ತ ಸ್ಥಾನಮಾನಗಳ ಕುರಿತು ಹಕ್ಕೋ ತ್ತಾಯ ಮಂಡಿಸುವAತೆಯೂ ಸಭೆ ಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಮಾಲೋಚನಾ ಸಭೆಯಲ್ಲಿ ವ್ಯಕ್ತಗೊಂಡ ಅಭಿಪ್ರಾಯದಂತೆ, ಲೋಕಸಭಾ ಚುನಾವಣೆ ಸಮೀಪಿಸು ತ್ತಿರುವುದರಿಂದ ಅರ್ಹರನ್ನು ಮತದಾ ರರ ಪಟ್ಟಿಗೆ ಸೇರಿಸಲು ಬ್ಲಾಕ್ ಸಮಿತಿ ಅಧ್ಯಕ್ಷರು ವಿಶೇಷ ಜವಾಬ್ದಾರಿ ತೆಗೆದುಕೊಳ್ಳಬೇಕು. ಎಲ್ಲ ಮುಖಂಡ ರನ್ನು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೂಡಲೇ ಎಲ್ಲಾ ಬ್ಲಾಕ್ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಬೇಕು. ಬ್ಲಾಕ್ ಸಮಿತಿ ರಚನೆ ಕಾರ್ಯ ಪೂರ್ಣಗೊಂಡ ಬಳಿಕ ಆಯಾ ವ್ಯಾಪ್ತಿಯ ವಲಯ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದು ಪಿ.ಎ. ಹನೀಫ್ ಸೂಚಿಸಿದರು.
ಸಭೆಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯದ್ ಭಾವ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಜಿ. ಪೀಟರ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷÀ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಎಂ. ಎ. ಶಮೀರ್, ಕುಶಾಲನಗರ ಬ್ಲಾಕ್ ಅಧ್ಯಕ್ಷರಾದ ಕೆ.ಇ. ಅಬ್ದುಲ್ ರಜಾಕ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎ.ಎಂ. ಉಮ್ಮರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಅಕ್ಮಲ್ ಪಾಷ ಉಪಸ್ಥಿತರಿದ್ದರು.