ಸೋಮವಾರಪೇಟೆ, ಡಿ. ೨೦: ಕಳೆದ ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿರುವ ಘಟನೆ ನಡೆದಿದೆ.

ಸಮೀಪದ ಶಾಂತಳ್ಳಿ-ಬಸವನಕಟ್ಟೆ ಗ್ರಾಮ ನಿವಾಸಿ ಬಸವರಾಜು ಮತ್ತು ಶೀಲಾ ದಂಪತಿಯ ಪುತ್ರಿ ಶಾಲಿನಿ (೨೩) ಎಂಬಾಕೆಯೇ ಸಾವನ್ನಪ್ಪಿದವಳು. ಈ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಶಾಲಿನಿ, ಕಳೆದ ಒಂದು ತಿಂಗಳ ಹಿಂದೆ ಮನೆಗೆ ವಾಪಸ್ ಆಗಿದ್ದಳು. ತಾ. ೧೮ರಂದು ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ತಕ್ಷಣ ಆಕೆಯನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಈ ಬಗ್ಗೆ ಮೃತಳ ತಂದೆ ಬಸವರಾಜು ಅವರು ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತೆ ಶಾಲಿನಿ ಪೋಷಕರೊಂದಿಗೆ ಈರ್ವರು ಸಹೋದರಿಯರನ್ನು ಅಗಲಿದ್ದಾಳೆ.