ಪೊನ್ನಂಪೇಟೆ, ಡಿ. ೨೭: ಪ್ರತಿಯೊಬ್ಬರೂ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಡಿ. ದಯಾನಂದ ಹೇಳಿದರು.

ಗೋಣಿಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿರುವ ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟಿçÃಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರದ ೪ನೇ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗೆ ಒಳಪಡುವಂತಹ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿದ್ದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಕೆ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಶಿಕ್ಷಣ ಪಡೆದುಕೊಳ್ಳುವ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು. ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಕೆ.ಎಂ. ಕುಸುಮ್, ಸಹ ಶಿಬಿರಾಧಿಕಾರಿ ಸಚಿನ್ ನಾಯಕ್ ಇನ್ನಿತರರು ಇದ್ದರು.