ಮಡಿಕೇರಿ, ಡಿ. ೩೦: ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಕ್ರೀಡಾಕೂಟ ತಾ. ೩೧ರಂದು (ಇಂದು) ಮೂರ್ನಾಡಿನಲ್ಲಿ ನಡೆಯಲಿದೆ.

ಬೆಳಿಗ್ಗೆ ೯.೩೦ಕ್ಕೆ ಮೂರ್ನಾಡು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಸಮಾಜದ ಅಧ್ಯಕ್ಷ ಚೆನಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.