ಮಡಿಕೇರಿ, ಡಿ. ೩೦: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ವತಿಯಿಂದ `ಭವಿಷ್ಯ ನಿಧಿ ನಿಮ್ಮ ಹತ್ತಿರ' ೨.೦ ಅಡಿಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯಿಂದ ಮಡಿಕೇರಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಸಲಾಯಿತು. ಉದ್ಯೋಗದಾತರು, ಉದ್ಯೋಗಗಳು ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ವಿಭಾಗ ಸಹಾಯಕ ರೋಶನ್, ಪ್ರವರ್ತನ ಅಧಿಕಾರಿ ಸೌರಭ್, ಎಸ್.ಎಸ್.ಎ. ಪಿ.ಎಂ. ಸ್ವಸ್ತಿಕ್ ಹಾಗೂ ತೇಜಸ್ ಕೃಷ್ಣನ್, ಇ.ಎಸ್.ಐ.ಸಿ ರವೀಂದ್ರನ್ ಎಚ್.ಎಸ್ ಹಾಜರಿದ್ದರು.