ಸೋಮವಾರಪೇಟೆ, ಜ. ೫: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಇವಿಎಂ ಯಂತ್ರದ ಮೂಲಕ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾದಾಪುರದಲ್ಲಿ ಮತದಾನದ ಪ್ರಾತ್ಯಕ್ಷಿಕೆ ನಡೆಯಿತು.

ಚುನಾವಣಾ ಆಯೋಗದ ನಿರ್ದೇಶನ, ಜಿಲ್ಲಾಧಿಕಾರಿಗಳ ಆದೇಶದ ಮೇರೆ ಮಾದಾಪುರದ ಬಸ್ ನಿಲ್ದಾಣದಲ್ಲಿ ಪ್ರಾತ್ಯಕ್ಷಿಕೆ ಆಯೋಜಿಸಿದ್ದು, ನೂರಾರು ಮಂದಿ ಮತದಾನ ಮಾಡಿದರು. ಇವಿಎಂ ಯಂತ್ರಗಳ ಮೂಲಕ ನಡೆಯುವ ಮತದಾನದ ಪಾರದರ್ಶಕತೆ ಹಾಗೂ ಗೌಪ್ಯತೆಯ ಬಗ್ಗೆ ಅಧಿಕಾರಿಗಳು, ಮತದಾರರಿಗೆ ಮನವರಿಕೆ ಮಾಡಿಕೊಟ್ಟರು.

ಸೆಕ್ಟರ್ ಅಧಿಕಾರಿಯಾಗಿರುವ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ವರದರಾಜು, ಪೊಲೀಸ್ ಸಿಬ್ಬಂದಿ ಹರೀಶ್ ಅವರುಗಳು, ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.