ಮಡಿಕೇರಿ. ಜ. ೫ : ಪ್ರಾಚೀನ ಆದಿಮ ಸಂಜಾತ ಸೂಕ್ಷö್ಮ ಜನಾಂಗ ಕೊಡವರನ್ನು ವಿಶ್ವ ರಾಷ್ಟç ಸಂಸ್ಥೆಯ ನಿರ್ಣಯ ೨೧೭ ಂ (III) ರನ್ವಯ ಮಾನ್ಯತೆ ನೀಡಿ ಕೊಡವರ ಸ್ವಯಂ-ನಿರ್ಣಯದ ಹಕ್ಕುಗಳನ್ನು ಅಂತರರಾಷ್ಟಿçÃಯ ಕಾನೂನಿನ ಅಡಿಯಲ್ಲಿ ಗೌರವಿಸಬೇಕು ಮತ್ತು ಖಾತರಿಪಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ.

ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಅಂತರರಾಷ್ಟಿçÃಯ ಕಾನೂನಿನಡಿ ಕೊಡವರಿಗೆ ಮಾನ್ಯತೆ, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡಬೇಕೆಂದು ಒತ್ತಾಯಿಸಿದರು.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರ ಮೂಲಕ ಡಾ .ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಸಲ್ಲಿಸಿದರು.

ಸಿಎನ್‌ಸಿ ಪ್ರಮುಖರಾದ ಬೊಳ್ಳಮ್ಮ ನಾಣಯ್ಯ, ಲೆಫ್ಟಿನೆಂಟ್ ಕರ್ನಲ್ ಪಾರ್ವತಿ, ಬೊಟ್ಟಂಗಡ ಸವಿತಾ, ಚೋಳಪಂಡ ಜ್ಯೋತಿ ನಾಣಯ್ಯ, ಅಪ್ಪನೆರವಂಡ ಶಾಂತಿ ಅಚ್ಚಪ್ಪ, ಚೆಪುö್ಪಡಿರ ಜಾನ್ಸಿ ಪೊನ್ನಪ್ಪ, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಅಜ್ಜಿಕುಟ್ಟೀರ ಲೋಕೇಶ್, ಬೊಟ್ಟಂಗಡ ಗಿರೀಶ್, ಕಿರಿಯಮಾಡ ಶೆರಿನ್, ಚಂಬAಡ ಜನತ್, ಮಂದಪAಡ ಮನೋಜ್, ಕಾಟುಮಣಿಯಂಡ ಉಮೇಶ್, ಮತ್ತಿತರರು ಸತ್ಯಾಗ್ರಹದಲ್ಲಿ ಪಾಲ್ಗೊಂಡು ಗುರು- ಕಾರೋಣ, ಸೂರ್ಯ-ಚಂದ್ರ, ಕಾವೇರಿ, ಭೂಮಿ ತಾಯಿ, ಪ್ರಕೃತಿ ಮಾತೆ ಮತ್ತು ಸಂವಿಧಾನದ ಹೆಸರಿನಲ್ಲಿ ಸಿಎನ್‌ಸಿಯ ರಾಜ್ಯಾಂಗದತ್ತ ಬೇಡಿಕೆಯ ಪರ ಪ್ರಮಾಣ ವಚನ ಸ್ವೀಕರಿಸಿದರು.