ಕೂಡಿಗೆ, ಫೆ. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರದಲ್ಲಿ ಆರಂಭಿಸಿರುವ ಕೂಸಿನ ಮನೆಯನ್ನು ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಸಿದರು. ನಂತರ ಮಾತನಾಡಿದ ಅವರು, ಸರಕಾರದ ಮಹತ್ವಾಕಾಂಕ್ಷೆಯ ಈ ಯೋಜನೆ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕಾರ್ಮಿಕರ ಮಕ್ಕಳ ಪಾಲನೆಗೆ ಸಹಕಾರಿಯಾಗಲಿದೆ. ಕೂಲಿ ಕಾರ್ಮಿಕರು ಕೂಡ ತಮ್ಮ ಮಕ್ಕಳನ್ನು ಇಲ್ಲಿಗೆ ದಾಖಲಿಸಿ ನಿಶ್ಚಿಂvಯಿAದ ಕೆಲಸಕ್ಕೆ ತೆರಳಬಹುದು. ೬ ತಿಂಗಳಿAದ ಮೂರು ವರ್ಷದ ಮಕ್ಕಳನ್ನು ಇಲ್ಲಿ ದಾಖಲಿಸಬಹುದು. ದಾಖಲಾದ ಮಕ್ಕಳನ್ನು ನಿಭಾಯಿಸಲು ಮೂವರು ಕೇರ್ಟೇಕರ್ಗಳನ್ನು ನಿಯೋಜಿಸಿ ತೆರಬೇತಿ ನೀಡಲಾಗಿದೆ. ಮಕ್ಕಳಿಗೆ ಇಲ್ಲಿ ಪ್ರತಿದಿನ ಪೌಷ್ಟಿಕ ಆಹಾರ ಒದಗಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ್, ಖತೀಜ, ಜ್ಯೋತಿ, ಈರಯ್ಯ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ ಶಿಕ್ಷಕಿಯರು ಇದ್ದರು.