ಮಡಿಕೇರಿ, ಫೆ. ೨೦: ಪೊನ್ನಂಪೇಟೆ ಸಮೀಪದ ಹುದೂರು ಶ್ರೀ ಅಯ್ಯಪ್ಪ, ಭದ್ರಕಾಳಿ ಮತ್ತು ಭಗವತಿ ದೇವಸ್ಥಾನದ ಆವರಣದಲ್ಲಿ ತಾ.೨೩ರಂದು ಮಹಾ ಚಂಡಿಕಾ ಹೋಮ ನಡೆಸಲಾಗುತ್ತದೆ ಎಂದು ದೇವಸ್ಥಾನದ ತಕ್ಕಮುಖ್ಯಸ್ಥರು ಹಾಗೂ ಅಧ್ಯಕ್ಷ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ ೭ ಗಂಟೆಯಿAದ ಉಡುಪಿಯ ಪ್ರಸಿದ್ಧ ತಂತ್ರಿಗಳಾದ ಶ್ರೀ ವಿಖ್ಯಾತ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಮಹಾ ಚಂಡಿಕಾ ಹೋಮ ನಡೆಯಲಿದೆ. ಬೆಳಿಗ್ಗೆ ೦೭-೩೦ ಗಂಟೆಗೆ ಗಣಹೋಮದ ನಂತರ ೮-೩೦ ಗಂಟೆಯಿAದ ಚಂಡಿಕಾ ಹೋಮ ನಡೆಯಲಿದ್ದು, ೧೨-೩೦ ಗಂಟೆಗೆ ಪೂರ್ಣಾಹುತಿ ಬಳಿಕ ಮಧ್ಯಾಹ್ನ ೦೧ ಗಂಟೆಗೆ ತೀರ್ಥ ಪ್ರಸಾದ ವಿನಿಯೋಗ ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.