ಮಡಿಕೇರಿ, ಫೆ. ೨೨: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ೧ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ರಾಗಿ ಮಾಲ್ಟ್ ವಿತರಿಸುವ ‘ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಿ ಮಾತನಾಡಿದ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು ೪೭೪ ಶಾಲೆಯ ೨೯,೫೮೪ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ.

ಬೆಳಿಗ್ಗೆ ಕೆನೆ ಭರಿತ ಸಕ್ಕರೆ ಹಾಕಿದ ಹಾಲು, ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಹಾಗೂ ಸಕ್ಕರೆ ಮಿಶ್ರಿತ ಹಾಲಿಗೆ ರಾಗಿ ಹೆಲ್ತ್ ಮಿಕ್ಸ್ ಒಳಗೊಂಡ ಮಾಲ್ಟ್ನ್ನು ವಿತರಿಸಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಬಿಸಿಊಟ ನೀಡಲಾಗುತ್ತದೆ ಎಂದರು.

೨೦೨೩ ರ ವರ್ಷವನ್ನು ಮಡಿಕೇರಿ, ಫೆ. ೨೨: ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ೧ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ರಾಗಿ ಮಾಲ್ಟ್ ವಿತರಿಸುವ ‘ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಿ ಮಾತನಾಡಿದ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು ೪೭೪ ಶಾಲೆಯ ೨೯,೫೮೪ ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ.

ಬೆಳಿಗ್ಗೆ ಕೆನೆ ಭರಿತ ಸಕ್ಕರೆ ಹಾಕಿದ ಹಾಲು, ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಹಾಗೂ ಸಕ್ಕರೆ ಮಿಶ್ರಿತ ಹಾಲಿಗೆ ರಾಗಿ ಹೆಲ್ತ್ ಮಿಕ್ಸ್ ಒಳಗೊಂಡ ಮಾಲ್ಟ್ನ್ನು ವಿತರಿಸಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಬಿಸಿಊಟ ನೀಡಲಾಗುತ್ತದೆ ಎಂದರು.

೨೦೨೩ ರ ವರ್ಷವನ್ನು ಅನ್ನಪೂರ್ಣ ಸಂಸ್ಥೆಯವರು ಬಹುಪೌಷ್ಟಿಕಾಂಶವುಳ್ಳ, ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಮಿಶ್ರಣವನ್ನು ಉಚಿತವಾಗಿ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ಹಿಂದೆ ಮನೆಗಳಲ್ಲಿ ಸಿರಿಧಾನ್ಯಗಳನ್ನು ಹೆಚ್ಚು ಬಳಸಲಾಗುತ್ತಿತ್ತು, ಹುರುಳಿ, ಅವರೆ, ತೊಗರಿ, ಅಲಸಂದೆ ಇಂತಹ ಕಾಳುಗಳ ಆಹಾರವನ್ನು ಉಪಯೋಗಿಸುತ್ತಿದ್ದರು. ಇತ್ತೀಚೆಗೆ ಬಳಕೆ ಕಡಿಮೆಯಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ರಾಗಿ ಮಾಲ್ಟ್ನ್ನು ವಿತರಿಸಲಾಗುತ್ತಿದೆ ಎಂದರು.

ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ ಮಾತನಾಡಿ, ಸರ್ಕಾರ ಬಿಸಿಯೂಟ, ಬಿಸಿಹಾಲು, ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಇವುಗಳನ್ನು ಸರಿಯಾಗಿ ಬಳಸಿಕೊಂಡು ಓದಿನ ಕಡೆಗೆ ಗಮನಹರಿಸಬೇಕು ಎಂದು ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಕೆ. ಸುಶೀಲ ಮಾತನಾಡಿ, ಪೂರ್ವ ಪ್ರಾಥಮಿಕ (ಎಲ್‌ಕೆಜಿ) ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಆರಂಭವಾಗಿದೆ. ಹಾಗೆಯೇ ಒಂದನೇ ತರಗತಿಯಿಂದ ಇಂಗ್ಲೀಷ್ ಮಾಧ್ಯಮ ಆರಂಭವಾಗಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ನಗರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳ ಅವರು ಮಾಹಿತಿ ನೀಡಿ ಶಾಲೆಯ ೭ ನೇ ತರಗತಿ ವಿದ್ಯಾರ್ಥಿಗಳು ಹಾಕಿ (ಪ್ರೀತಮ್), ಫುಟ್ಬಾಲ್ (ಕಾವ್ಯ), ಅಥ್ಲೆಟಿಕ್ (ಮೇಘನ್), ಗವಿನ್, ಬಾಲಾಜಿ, ಪೂರ್ವಿತ ಗ್ವಾಲಿಯಾರ್, ರಾಂಚಿ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿ ರಾಷ್ಟç ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದರು. ಆ ನಿಟ್ಟಿನಲ್ಲಿ ಕರಾಟೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಕೋರಿದರು.

ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ್ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಎಸ್‌ಡಿಎಂಸಿ ಉಪಾಧ್ಯಕೆÀ್ಷ ರೇಷ್ಮ ತೇಜ, ಜಗದೀಶ್, ಶಿಕ್ಷಕಿಯವರು, ಇತರರು ಇದ್ದರು.